ಬ್ರೇಕಿಂಗ್ ನ್ಯೂಸ್
19-04-26 10:20 am HK News Staffer ಕ್ರೈಂ
ಉಳ್ಳಾಲ, ಏ.19: ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದ ಬಾಲಕನೋರ್ವ ಪಕ್ಕದ ನಾಲೆಯೊಂದರ ಕೆಸರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ನಡೆದಿದೆ.
ಅಂಬ್ಲಮೊಗರು ಗ್ರಾಮದ ಜರಿ ಹೌಸ್ ನಿವಾಸಿ ಶಿವರಾಮ್ ಅವರ ಪುತ್ರ ಸೃಜನ್(17) ಮೃತಪಟ್ಟ ಬಾಲಕ. ಸೃಜನ್ ಫ್ರಥಮ ಪಿಯುಸಿ ಮುಗಿಸಿದ್ದು ಬೇಸಿಗೆ ರಜೆ ಇದ್ದ ಕಾರಣ ಶನಿವಾರ ಮಧ್ಯಾಹ್ನ ತನ್ನ ಮೂವರು ಸ್ನೇಹಿತರೊಂದಿಗೆ ಅಂಬ್ಲಮೊಗರುವಿನ ಖಂಡಿಲ ಎಂಬಲ್ಲಿನ ಖಾಸಗಿ ವಿವಿಗೆ ಸೇರಿದ ಜಮೀನಿನ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದನೆನ್ನಲಾಗಿದೆ. ಬಳಿಕ ಕೈಕಾಲು ತೊಳೆಯಲು ಪಕ್ಕದ ನಾಲೆಯೊಂದಕ್ಕೆ ಸೃಜನ್ ಏಕಾಂಗಿಯಾಗಿ ಇಳಿದಿದ್ದು, ಈ ವೇಳೆ ಆತನ ಕಾಲುಗಳು ನಾಲೆಯ ಕೆಸರಿನಲ್ಲಿ ಮುಳುಗಿವೆ. ಸೃಜನ್ ನನ್ನು ಮತ್ತೋರ್ವ ಸ್ನೇಹಿತ ರಕ್ಷಿಸಲು ಪ್ರಯತ್ನಿಸಿದ್ದು ಆತನೂ ಕೆಸರಿನಲ್ಲಿ ಮುಳುಗುತ್ತಾನೆ ಎಂದಾಗ ಉಳಿದ ಸ್ನೇಹಿತರು ಆತನನ್ನ ಎಳೆದು ರಕ್ಷಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾದ ಬಾಲಕರು ವಿಚಾರವನ್ನು ಯಾರಲ್ಲೂ ತಿಳಿಸದೆ ತಮ್ಮ ಮನೆ ಸೇರಿದ್ದರು. ರಾತ್ರಿ 8 ಗಂಟೆಯಾದರೂ ಸೃಜನ್ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿ ಸ್ನೇಹಿತರಲ್ಲಿ ವಿಚಾರಿಸಿದಾಗ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಕೊಣಾಜೆ ಪೊಲೀಸರು ಧಾವಿಸಿ ಸೃಜನ್ ಗಾಗಿ ನಾಲೆಯಲ್ಲಿ ಶೋಧ ನಡೆಸಿದ್ದಾರೆ. ನಾಲೆಯಲ್ಲಿ ಭಾರೀ ಹೂಳು ತುಂಬಿದ್ದರಿಂದ ರಕ್ಷಣಾ ಕಾರ್ಯವೂ ಕಷ್ಟವಾಗಿತ್ತು. ರಾತ್ರಿ ವೇಳೆ ನಿರ್ಜನ ಪ್ರದೇಶದಲ್ಲಿ ರಕ್ಷಣಾ ಕಾರ್ಯಕ್ಕೆ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಟಿಪ್ಪರ್ ಲಾರಿಗಳ ಹೆಡ್ ಲೈಟ್ ಸಹಾಯದಿಂದ ಮಧ್ಯರಾತ್ರಿ ವರೆಗೂ ಕಾರ್ಯಾಚರಣೆ ನಡೆಸಲಾಗಿತ್ತು. ಉತ್ತರ ಭಾರತದ ನುರಿತ ಕಾರ್ಮಿಕರು ಹರಸಾಹಸ ಪಟ್ಟು ಕೊನೆಗೂ ಮಧ್ಯರಾತ್ರಿ ಬಾಲಕನ ಮೃತದೇಹವನ್ನ ನಾಲೆಯಿಂದ ಮೇಲಕ್ಕೆತ್ತಿದ್ದಾರೆ.
ಮೃತ ಸೃಜನ್ ತಂದೆ ರಿಕ್ಷಾ ಚಾಲಕರಾಗಿದ್ದು, ತಾಯಿ ಜಯಲಕ್ಷ್ಮಿ ಅಂಬ್ಲಮೊಗರು ಗಾಂಧಿನಗರದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿದ್ದಾರೆ. ದಂಪತಿಗೆ ಸೃಜನ್ ಹಿರಿಯ ಮಗನಾಗಿದ್ದು, ಮತ್ತೋರ್ವ ಮಗಳು ಇದ್ದಾಳೆ. ಕೊಣಾಜೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm