ಬ್ರೇಕಿಂಗ್ ನ್ಯೂಸ್
20-04-26 03:44 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 20: ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಉಲ್ಲೇಖಿಸಿ ಡಿಸಿಐಆರ್ ಎಸ್ಪಿ ಎಸ್.ಎಸ್ ಕಾಶಿ ಅವರು ಡಿಜಿಪಿ ಸಲೀಂ ಅವರಿಗೆ ಲಿಖಿತ ದೂರು ನೀಡಿದ್ದಾರೆ. ಮಾನಸಿಕ ಕಿರುಕುಳ, ದರ್ಪ ಹಾಗೂ ತಾರತಮ್ಯ ಆರೋಪಗಳನ್ನು ಮಾಡಿ ದೂರು ಸಲ್ಲಿಸಿದ್ದಾರೆ.
"ನೀವು 30 ನಿಮಿಷ ಸಮಯ ನೀಡಿದರೆ ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿಯ ಎಲ್ಲ ಕರ್ಮಕಾಂಡವನ್ನು ಸಂಪೂರ್ಣ ಬಯಲು ಮಾಡುತ್ತೇನೆ” ಎಂದು ದೂರಿನಲ್ಲಿ ಹೇಳಿದ್ದು ಪ್ರಕರಣ ಕುತೂಹಲ ತಂದಿದೆ. ಇಲಾಖೆಯಲ್ಲಿ ಅಧೀನ ಅಧಿಕಾರಿಗಳು ತಮ್ಮ ಮಾತಿನಂತೆ ಕೆಲಸ ಮಾಡದಿದ್ದರೆ ಮೆಮೊ ನೀಡುವುದರ ಮೂಲಕ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದಲ್ಲದೆ, ಕನ್ನಡಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕಾಶಿ, ಈ ಕುರಿತು ಹಲವು ಬಾರಿ ಲಿಖಿತ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಐಪಿಎಸ್ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿ ಕೆಳಹಂತದ ಸಿಬ್ಬಂದಿ ಮೇಲೆ ದರ್ಪ, ತಾರತಮ್ಯ ಹಾಗೂ ಸ್ವಜನಪಕ್ಷಪಾತ ತೋರಿಸುತ್ತಿದ್ದಾರೆ. ವಿಶೇಷವಾಗಿ ಹೊರ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದೂ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರು ಕಮಿಷನರ್ ವಿರುದ್ಧದ ಆರೋಪಗಳು, ಅಧೀನ ಸಿಬ್ಬಂದಿಗೆ ನೀಡಿದ ಕಿರುಕುಳ ಹಾಗೂ ಇತರೇ ದೌರ್ಜನ್ಯಗಳ ಕುರಿತಾಗಿ ವಿವರವಾಗಿ ಹೇಳಲು ಒಂದು ವಾರದೊಳಗೆ ಭೇಟಿಗೆ ಅವಕಾಶ ನೀಡುವಂತೆ ಡಿಜಿಪಿಗೆ ಎಸ್ಪಿ ಕಾಶಿ ಮನವಿ ಮಾಡಿದ್ದಾರೆ. ಈ ಬೆಳವಣಿಗೆ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ಸೆಳೆದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm