ಬ್ರೇಕಿಂಗ್ ನ್ಯೂಸ್
20-04-26 09:35 pm HK News Staffer ಕ್ರೈಂ
ಬೀದರ್, ಎಪ್ರಿಲ್ 20: ಬಿರು ಬಿಸಿಲಿನ ಝಳಕ್ಕೆ ಬೀದರ್ನಲ್ಲಿ 20 ವರ್ಷದ ಯುವಕನೊಬ್ಬ ಬಲಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ತಾಳಲಾರದೇ ಉತ್ತರ ಪ್ರದೇಶ ಮೂಲದ ಮಹ್ಮದ್ (20) ಎಂಬ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಕಮಲಾನಗರ ಪಟ್ಟಣದಲ್ಲಿ ಎಪ್ರಿಲ್ 14ರಂದು ಘಟನೆ ನಡೆದಿದೆ. ಡಿಗ್ಗಿ - ಕಮಲಾನಗರ ರಸ್ತೆ ಮಧ್ಯೆ ಬಿರು ಬಿಸಿಲಿಗೆ ತಲೆಯೊಡ್ಡಿ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಅಲ್ಲಾಪುರೆ, ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುಪಿ ಮೂಲದ ಮಿರ್ಜಾಪುರ ಪಲ್ಲಾದ ನಿವಾಸಿಯಾಗಿದ್ದು ನಡೆದುಕೊಂಡು ಹೋಗುವಾಗ ತಲೆ ಸುಸ್ತು ಬರುತ್ತಿದೆ ಎಂದು ದಾರಿಯಲ್ಲಿದ್ದ ಮೆಕ್ಯಾನಿಕ್ ಅಂಗಡಿಯಲ್ಲಿ ನೀರು ಕೇಳಿ ಕುಡಿದಿದ್ದ. ಚಕ್ಕರ್ ಬರುತ್ತಿದೆ ಎಂದು ಕೆಲಹೊತ್ತು ವಿಶ್ರಾಂತಿ ಪಡೆದು, ನಂತರ ಡಿಗ್ಗಿ ಗ್ರಾಮದ ಕಡೆ ನಡೆದು ತೆರಳಿದ್ದ. ಮೃತ ಯುವಕನ ತಂದೆ ಲಯಿಕ್ ಅಹ್ಮದ್ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಎಪ್ರಿಲ್ 12ರಂದು ಕಮಲಾನಗರ ಪಟ್ಟಣಕ್ಕೆ ಬಂದಿದ್ದ. 14ರಂದು ತರಕಾರಿ ತರಲೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದು, 15ರಂದು ರಸ್ತೆ ಬದಿ ಬಿದ್ದು ಶವವಾಗಿ ಪತ್ತೆಯಾಗಿದ್ದಾನೆ. ಬೀದರಿನಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ಜನಸಾಮಾನ್ಯರು ಹೊರಕ್ಕೆ ಬರಲಾಗದ ಸ್ಥಿತಿಗೆ ತಲುಪಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm