ಬ್ರೇಕಿಂಗ್ ನ್ಯೂಸ್
20-04-26 09:35 pm HK News Staffer ಕ್ರೈಂ
ಬೀದರ್, ಎಪ್ರಿಲ್ 20: ಬಿರು ಬಿಸಿಲಿನ ಝಳಕ್ಕೆ ಬೀದರ್ನಲ್ಲಿ 20 ವರ್ಷದ ಯುವಕನೊಬ್ಬ ಬಲಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ತಾಳಲಾರದೇ ಉತ್ತರ ಪ್ರದೇಶ ಮೂಲದ ಮಹ್ಮದ್ (20) ಎಂಬ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಕಮಲಾನಗರ ಪಟ್ಟಣದಲ್ಲಿ ಎಪ್ರಿಲ್ 14ರಂದು ಘಟನೆ ನಡೆದಿದೆ. ಡಿಗ್ಗಿ - ಕಮಲಾನಗರ ರಸ್ತೆ ಮಧ್ಯೆ ಬಿರು ಬಿಸಿಲಿಗೆ ತಲೆಯೊಡ್ಡಿ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಅಲ್ಲಾಪುರೆ, ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುಪಿ ಮೂಲದ ಮಿರ್ಜಾಪುರ ಪಲ್ಲಾದ ನಿವಾಸಿಯಾಗಿದ್ದು ನಡೆದುಕೊಂಡು ಹೋಗುವಾಗ ತಲೆ ಸುಸ್ತು ಬರುತ್ತಿದೆ ಎಂದು ದಾರಿಯಲ್ಲಿದ್ದ ಮೆಕ್ಯಾನಿಕ್ ಅಂಗಡಿಯಲ್ಲಿ ನೀರು ಕೇಳಿ ಕುಡಿದಿದ್ದ. ಚಕ್ಕರ್ ಬರುತ್ತಿದೆ ಎಂದು ಕೆಲಹೊತ್ತು ವಿಶ್ರಾಂತಿ ಪಡೆದು, ನಂತರ ಡಿಗ್ಗಿ ಗ್ರಾಮದ ಕಡೆ ನಡೆದು ತೆರಳಿದ್ದ. ಮೃತ ಯುವಕನ ತಂದೆ ಲಯಿಕ್ ಅಹ್ಮದ್ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಎಪ್ರಿಲ್ 12ರಂದು ಕಮಲಾನಗರ ಪಟ್ಟಣಕ್ಕೆ ಬಂದಿದ್ದ. 14ರಂದು ತರಕಾರಿ ತರಲೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದು, 15ರಂದು ರಸ್ತೆ ಬದಿ ಬಿದ್ದು ಶವವಾಗಿ ಪತ್ತೆಯಾಗಿದ್ದಾನೆ. ಬೀದರಿನಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ಜನಸಾಮಾನ್ಯರು ಹೊರಕ್ಕೆ ಬರಲಾಗದ ಸ್ಥಿತಿಗೆ ತಲುಪಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm