ಬ್ರೇಕಿಂಗ್ ನ್ಯೂಸ್
21-04-26 03:13 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 21: ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ ಡಾ.ಎಂ.ಎ. ಸಲೀಂ ಮಂಗಳೂರಿಗೆ ಆಗಮಿಸಿದ್ದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ.
ಇದೇ ವೇಳೆ, ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ಗಳಿಗೆ ಹತ್ತು ವರ್ಷದ ಸೇವೆ ಬಳಿಕ ವರ್ಗಾವಣೆಗೆ ಆದೇಶ ಆಗಿದ್ದರೂ, ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ರಿಲೀವ್ ಮಾಡದೇ ಇರುವುದರ ಬಗ್ಗೆ ಪೊಲೀಸ್ ಸಿಬಂದಿ ಕುಟುಂಬಸ್ಥರು ಡಿಜಿಪಿ ಸಲೀಂ ಅವರಿಗೆ ಮನವಿ ನೀಡಿ ಅಳಲು ಹೇಳಿಕೊಂಡಿದ್ದಾರೆ.
'ಕೋಮುಗಲಭೆ ಕಾರಣ ಕೊಟ್ಟು ಕಮಿಷನರ್ ಇಲ್ಲಿಂದ ರಿಲೀವ್ ಮಾಡಿಲ್ಲ. ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಬಂದು 10 ವರ್ಷದಿಂದ ಇದ್ದೀವಿ. ಊರಿನಲ್ಲಿ ವಯಸ್ಸಾದವರಿದ್ದಾರೆ. ನಮ್ಮನ್ನೇ ನಂಬಿಕೊಂಡವರು ಇದ್ದಾರೆ. ವರ್ಗಾವಣೆ ಆಗಿ ನಾಲ್ಕು ತಿಂಗಳಾದ್ರೂ ಬಿಟ್ಟುಕೊಟ್ಟಿಲ್ಲ. ಈಗ ಮಕ್ಕಳ ಸ್ಕೂಲ್ ಅಡ್ಮಿಷನ್ ಮಾಡಿಸಬೇಕಾ, ಬೇಡ್ವಾ ಅನ್ನುವ ಪರಿಸ್ಥಿತಿ ಇದೆ. ನಮಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಡಿಜಿಯವರಿಗೆ ಮನವಿ ಮಾಡಿದ್ದೇವೆ' ಎಂದು ಪೊಲೀಸ್ ಸಿಬಂದಿ ಕುಟುಂಬ ಸದಸ್ಯರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮನ್ನು ರಿಲೀವ್ ಮಾಡದೇ ಇದ್ರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ ಅವರು, ಇಲ್ಲಿಂದ ಪಾದಯಾತ್ರೆ ಮೂಲಕ ತೆರಳಿ ಮತ್ತೆ ಡಿಜಿಪಿ, ಗೃಹ ಸಚಿವರನ್ನು ಭೇಟಿ ಆಗುತ್ತೇವೆ ಎಂದೂ ಹೇಳಿದರು.


ಜಿಲ್ಲೆಯ ಪೊಲೀಸ್ ಪ್ರಗತಿ ಪರಿಶೀಲನೆ ಬಳಿಕ ಮಾಧ್ಯಮಕ್ಕೆ ಮಾತನಾಡಿದ ಡಿಜಿಪಿ ಸಲೀಂ, ಕಳೆದ ಒಂದು ವರ್ಷದಿಂದ ಇಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇದನ್ನೇ ಮುಂದುವರಿಸಿಕೊಂಡು ಹೋಗಿ ಅಂತ ಹೇಳಿದ್ದೇನೆ. ಉತ್ತರ ಕರ್ನಾಟಕ ಭಾಗದವರು ವರ್ಗಾವಣೆ ವಿಚಾರದಲ್ಲಿ ಮನವಿ ನೀಡಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. 15 ಶೇಕಡಾದಂತೆ ಹಂತ ಹಂತವಾಗಿ ರಿಲೀವ್ ಮಾಡಿ ಅಂತ ಹೇಳಿದ್ದೇನೆ ಎಂದು ಹೇಳಿದರು.
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ವಿರುದ್ಧ ಡಿಸಿಆರ್ ಇ ವಿಭಾಗದ ಎಸ್ಪಿ ಎಸ್.ಎಸ್.ಕಾಶಿ ದೂರು ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಡಿಜಿ ಸಲೀಂ ಉತ್ತರಿಸದೇ ಹೊರಟು ಹೋದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm