ಬ್ರೇಕಿಂಗ್ ನ್ಯೂಸ್
21-04-26 03:13 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 21: ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ ಡಾ.ಎಂ.ಎ. ಸಲೀಂ ಮಂಗಳೂರಿಗೆ ಆಗಮಿಸಿದ್ದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ.
ಇದೇ ವೇಳೆ, ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ಗಳಿಗೆ ಹತ್ತು ವರ್ಷದ ಸೇವೆ ಬಳಿಕ ವರ್ಗಾವಣೆಗೆ ಆದೇಶ ಆಗಿದ್ದರೂ, ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ರಿಲೀವ್ ಮಾಡದೇ ಇರುವುದರ ಬಗ್ಗೆ ಪೊಲೀಸ್ ಸಿಬಂದಿ ಕುಟುಂಬಸ್ಥರು ಡಿಜಿಪಿ ಸಲೀಂ ಅವರಿಗೆ ಮನವಿ ನೀಡಿ ಅಳಲು ಹೇಳಿಕೊಂಡಿದ್ದಾರೆ.
'ಕೋಮುಗಲಭೆ ಕಾರಣ ಕೊಟ್ಟು ಕಮಿಷನರ್ ಇಲ್ಲಿಂದ ರಿಲೀವ್ ಮಾಡಿಲ್ಲ. ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಬಂದು 10 ವರ್ಷದಿಂದ ಇದ್ದೀವಿ. ಊರಿನಲ್ಲಿ ವಯಸ್ಸಾದವರಿದ್ದಾರೆ. ನಮ್ಮನ್ನೇ ನಂಬಿಕೊಂಡವರು ಇದ್ದಾರೆ. ವರ್ಗಾವಣೆ ಆಗಿ ನಾಲ್ಕು ತಿಂಗಳಾದ್ರೂ ಬಿಟ್ಟುಕೊಟ್ಟಿಲ್ಲ. ಈಗ ಮಕ್ಕಳ ಸ್ಕೂಲ್ ಅಡ್ಮಿಷನ್ ಮಾಡಿಸಬೇಕಾ, ಬೇಡ್ವಾ ಅನ್ನುವ ಪರಿಸ್ಥಿತಿ ಇದೆ. ನಮಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಡಿಜಿಯವರಿಗೆ ಮನವಿ ಮಾಡಿದ್ದೇವೆ' ಎಂದು ಪೊಲೀಸ್ ಸಿಬಂದಿ ಕುಟುಂಬ ಸದಸ್ಯರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮನ್ನು ರಿಲೀವ್ ಮಾಡದೇ ಇದ್ರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ ಅವರು, ಇಲ್ಲಿಂದ ಪಾದಯಾತ್ರೆ ಮೂಲಕ ತೆರಳಿ ಮತ್ತೆ ಡಿಜಿಪಿ, ಗೃಹ ಸಚಿವರನ್ನು ಭೇಟಿ ಆಗುತ್ತೇವೆ ಎಂದೂ ಹೇಳಿದರು.


ಜಿಲ್ಲೆಯ ಪೊಲೀಸ್ ಪ್ರಗತಿ ಪರಿಶೀಲನೆ ಬಳಿಕ ಮಾಧ್ಯಮಕ್ಕೆ ಮಾತನಾಡಿದ ಡಿಜಿಪಿ ಸಲೀಂ, ಕಳೆದ ಒಂದು ವರ್ಷದಿಂದ ಇಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇದನ್ನೇ ಮುಂದುವರಿಸಿಕೊಂಡು ಹೋಗಿ ಅಂತ ಹೇಳಿದ್ದೇನೆ. ಉತ್ತರ ಕರ್ನಾಟಕ ಭಾಗದವರು ವರ್ಗಾವಣೆ ವಿಚಾರದಲ್ಲಿ ಮನವಿ ನೀಡಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. 15 ಶೇಕಡಾದಂತೆ ಹಂತ ಹಂತವಾಗಿ ರಿಲೀವ್ ಮಾಡಿ ಅಂತ ಹೇಳಿದ್ದೇನೆ ಎಂದು ಹೇಳಿದರು.
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ವಿರುದ್ಧ ಡಿಸಿಆರ್ ಇ ವಿಭಾಗದ ಎಸ್ಪಿ ಎಸ್.ಎಸ್.ಕಾಶಿ ದೂರು ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಡಿಜಿ ಸಲೀಂ ಉತ್ತರಿಸದೇ ಹೊರಟು ಹೋದರು.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am