ಬ್ರೇಕಿಂಗ್ ನ್ಯೂಸ್
22-04-26 02:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರು ನಗರದ ಕೆಲವು ಭಾಗಗಳಲ್ಲಿ ಮಿಂಚು, ಸಿಡಿಲಿನ ಆರ್ಭಟದೊಂದಿಗೆ ಗಾಳಿ ಮಳೆಯಾಗಿದ್ದು ಕೆಲವೆಡೆ ಅವಾಂತರ ಸಂಭವಿಸಿದೆ.
ನಗರದ ಅತ್ತಾವರ ಪ್ರದೇಶದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ಕಂಪೌಂಡ್ ಗೋಡೆ ಕುಸಿದು ಅಲ್ಲಿಯೇ ನಿಲ್ಲಿಸಿದ್ದ 5ಕ್ಕೂ ಹೆಚ್ಚು ಕಾರುಗಳ ಮೇಲೆ ಕಲ್ಲುಗಳು ಬಿದ್ದು ಜಖಂಗೊಂಡಿವೆ. ದೇವಸ್ಥಾನದಲ್ಲಿ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದರಿಂದ ಗೋಡೆ ಪಕ್ಕದಲ್ಲಿ ಸ್ಥಳೀಯರು ತಮ್ಮ ಕಾರುಗಳನ್ನು ಪಾರ್ಕ್ ಮಾಡಿದ್ದರು. ಬೇಸಗೆಯ ಒಂದೇ ಮಳೆಯಲ್ಲಿ ತಡೆಗೋಡೆ ಕುಸಿದಿದ್ದು ಕಲ್ಲಿನ ಸಮೇತ ಪಾರ್ಕಿಂಗ್ ಪ್ರದೇಶಕ್ಕೆ ಬಿದ್ದಿದೆ. ಏಕಾಏಕಿ ನಡೆದಿರುವ ಘಟನೆಯಿಂದಾಗಿ ಕಾರಿನ ಮಾಲೀಕರು ಸಂಕಷ್ಟಕ್ಕೀಡಾಗಿದ್ದಾರೆ.




ಇದೇ ವೇಳೆ, ಗಾಳಿ ಮಳೆಗೆ ಬೃಹತ್ ಅಶ್ವತ್ಥ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆ ಭಾಗಶಃ ಹಾನಿಯಾದ ಘಟನೆ ನಗರದ ರಥಬೀದಿ ಬಳಿಯ ಬಸವನಗುಡಿ ಮಠದ ಬಳಿಯಲ್ಲಿ ನಡೆದಿದೆ. ಮನೆಗೆ ಹಾನಿಯಾಗಿದ್ದು ಹಂಚಿನ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ 80 ವರ್ಷದ ಇಬ್ಬರು ವೃದ್ಧರು ಸಹಿತ ಐದಾರು ಜನ ಅಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವರಿಗೆ ಸೇರಿದ ಮನೆ ಇದಾಗಿದೆ.
ಬುಧವಾರ ನಸುಕಿನಲ್ಲಿ ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಸಿಡಿಲಿನ ಆರ್ಭಟ ಮಾತ್ರ ಎಲ್ಲೆಡೆ ಇತ್ತು. ಕದ್ರಿ, ಉರ್ವಾ ಭಾಗದಲ್ಲಿ ಮಳೆಯಾಗಿದ್ದರೆ ಶಕ್ತಿನಗರ ಭಾಗದಲ್ಲಿ ಮಳೆಯಾಗಿಲ್ಲ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm