ಬ್ರೇಕಿಂಗ್ ನ್ಯೂಸ್
22-04-26 02:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರು ನಗರದ ಕೆಲವು ಭಾಗಗಳಲ್ಲಿ ಮಿಂಚು, ಸಿಡಿಲಿನ ಆರ್ಭಟದೊಂದಿಗೆ ಗಾಳಿ ಮಳೆಯಾಗಿದ್ದು ಕೆಲವೆಡೆ ಅವಾಂತರ ಸಂಭವಿಸಿದೆ.
ನಗರದ ಅತ್ತಾವರ ಪ್ರದೇಶದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ಕಂಪೌಂಡ್ ಗೋಡೆ ಕುಸಿದು ಅಲ್ಲಿಯೇ ನಿಲ್ಲಿಸಿದ್ದ 5ಕ್ಕೂ ಹೆಚ್ಚು ಕಾರುಗಳ ಮೇಲೆ ಕಲ್ಲುಗಳು ಬಿದ್ದು ಜಖಂಗೊಂಡಿವೆ. ದೇವಸ್ಥಾನದಲ್ಲಿ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದರಿಂದ ಗೋಡೆ ಪಕ್ಕದಲ್ಲಿ ಸ್ಥಳೀಯರು ತಮ್ಮ ಕಾರುಗಳನ್ನು ಪಾರ್ಕ್ ಮಾಡಿದ್ದರು. ಬೇಸಗೆಯ ಒಂದೇ ಮಳೆಯಲ್ಲಿ ತಡೆಗೋಡೆ ಕುಸಿದಿದ್ದು ಕಲ್ಲಿನ ಸಮೇತ ಪಾರ್ಕಿಂಗ್ ಪ್ರದೇಶಕ್ಕೆ ಬಿದ್ದಿದೆ. ಏಕಾಏಕಿ ನಡೆದಿರುವ ಘಟನೆಯಿಂದಾಗಿ ಕಾರಿನ ಮಾಲೀಕರು ಸಂಕಷ್ಟಕ್ಕೀಡಾಗಿದ್ದಾರೆ.




ಇದೇ ವೇಳೆ, ಗಾಳಿ ಮಳೆಗೆ ಬೃಹತ್ ಅಶ್ವತ್ಥ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆ ಭಾಗಶಃ ಹಾನಿಯಾದ ಘಟನೆ ನಗರದ ರಥಬೀದಿ ಬಳಿಯ ಬಸವನಗುಡಿ ಮಠದ ಬಳಿಯಲ್ಲಿ ನಡೆದಿದೆ. ಮನೆಗೆ ಹಾನಿಯಾಗಿದ್ದು ಹಂಚಿನ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ 80 ವರ್ಷದ ಇಬ್ಬರು ವೃದ್ಧರು ಸಹಿತ ಐದಾರು ಜನ ಅಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವರಿಗೆ ಸೇರಿದ ಮನೆ ಇದಾಗಿದೆ.
ಬುಧವಾರ ನಸುಕಿನಲ್ಲಿ ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಸಿಡಿಲಿನ ಆರ್ಭಟ ಮಾತ್ರ ಎಲ್ಲೆಡೆ ಇತ್ತು. ಕದ್ರಿ, ಉರ್ವಾ ಭಾಗದಲ್ಲಿ ಮಳೆಯಾಗಿದ್ದರೆ ಶಕ್ತಿನಗರ ಭಾಗದಲ್ಲಿ ಮಳೆಯಾಗಿಲ್ಲ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm