ಬ್ರೇಕಿಂಗ್ ನ್ಯೂಸ್
22-04-26 02:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರು ನಗರದ ಕೆಲವು ಭಾಗಗಳಲ್ಲಿ ಮಿಂಚು, ಸಿಡಿಲಿನ ಆರ್ಭಟದೊಂದಿಗೆ ಗಾಳಿ ಮಳೆಯಾಗಿದ್ದು ಕೆಲವೆಡೆ ಅವಾಂತರ ಸಂಭವಿಸಿದೆ.
ನಗರದ ಅತ್ತಾವರ ಪ್ರದೇಶದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ಕಂಪೌಂಡ್ ಗೋಡೆ ಕುಸಿದು ಅಲ್ಲಿಯೇ ನಿಲ್ಲಿಸಿದ್ದ 5ಕ್ಕೂ ಹೆಚ್ಚು ಕಾರುಗಳ ಮೇಲೆ ಕಲ್ಲುಗಳು ಬಿದ್ದು ಜಖಂಗೊಂಡಿವೆ. ದೇವಸ್ಥಾನದಲ್ಲಿ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದರಿಂದ ಗೋಡೆ ಪಕ್ಕದಲ್ಲಿ ಸ್ಥಳೀಯರು ತಮ್ಮ ಕಾರುಗಳನ್ನು ಪಾರ್ಕ್ ಮಾಡಿದ್ದರು. ಬೇಸಗೆಯ ಒಂದೇ ಮಳೆಯಲ್ಲಿ ತಡೆಗೋಡೆ ಕುಸಿದಿದ್ದು ಕಲ್ಲಿನ ಸಮೇತ ಪಾರ್ಕಿಂಗ್ ಪ್ರದೇಶಕ್ಕೆ ಬಿದ್ದಿದೆ. ಏಕಾಏಕಿ ನಡೆದಿರುವ ಘಟನೆಯಿಂದಾಗಿ ಕಾರಿನ ಮಾಲೀಕರು ಸಂಕಷ್ಟಕ್ಕೀಡಾಗಿದ್ದಾರೆ.




ಇದೇ ವೇಳೆ, ಗಾಳಿ ಮಳೆಗೆ ಬೃಹತ್ ಅಶ್ವತ್ಥ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆ ಭಾಗಶಃ ಹಾನಿಯಾದ ಘಟನೆ ನಗರದ ರಥಬೀದಿ ಬಳಿಯ ಬಸವನಗುಡಿ ಮಠದ ಬಳಿಯಲ್ಲಿ ನಡೆದಿದೆ. ಮನೆಗೆ ಹಾನಿಯಾಗಿದ್ದು ಹಂಚಿನ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ 80 ವರ್ಷದ ಇಬ್ಬರು ವೃದ್ಧರು ಸಹಿತ ಐದಾರು ಜನ ಅಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವರಿಗೆ ಸೇರಿದ ಮನೆ ಇದಾಗಿದೆ.
ಬುಧವಾರ ನಸುಕಿನಲ್ಲಿ ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಸಿಡಿಲಿನ ಆರ್ಭಟ ಮಾತ್ರ ಎಲ್ಲೆಡೆ ಇತ್ತು. ಕದ್ರಿ, ಉರ್ವಾ ಭಾಗದಲ್ಲಿ ಮಳೆಯಾಗಿದ್ದರೆ ಶಕ್ತಿನಗರ ಭಾಗದಲ್ಲಿ ಮಳೆಯಾಗಿಲ್ಲ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm