ಬ್ರೇಕಿಂಗ್ ನ್ಯೂಸ್
22-04-26 02:15 pm HK News Staffer ಕ್ರೈಂ
ಮಡಿಕೇರಿ, ಎಪ್ರಿಲ್ 22: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ವಿರಾಜಪೇಟೆ ತಾಲೂಕಿನ ಕುಟ್ಟ ಎಂಬಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ರೆಸಾರ್ಟ್ ಒಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು ಘಟನೆ ಹಿನ್ನೆಲೆಯಲ್ಲಿ ಪೊಲೀಸರು ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಅಮೆರಿಕದ ವಾಷಿಂಗ್ಟನ್ ನಗರದಿಂದ ಪ್ರವಾಸ ಬಂದಿದ್ದ ಮಹಿಳೆಗೆ ಮತ್ತು ಬರುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬ ಕಾರ್ಮಿಕ ಕೃತ್ಯ ಎಸಗಿದವನಾಗಿದ್ದು ಮತ್ತು ಹೋಂಸ್ಟೇ ಮಾಲೀಕ ವಿಶಾಲ್ ಎಂಬ ಇಬ್ಬರನ್ನೂ ಬಂಧಿಸಲಾಗಿದೆ.
ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿದ್ದ ಜಾರ್ಖಂಡ್ ಮೂಲದ ವ್ಯಕ್ತಿ ವೃಜೇಶ್ ಕುಮಾರ್ ಸಿಹಿ ಪಾನಕಕ್ಕೆ ಮತ್ತು ಬರುವ ಔಷಧಿ ಬೆರಸಿ ಮಹಿಳೆಗೆ ನೀಡಿದ್ದಾನೆ. ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಗಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ.
ವಿಷಯ ತಿಳಿದ ಹೋಮ್ಸ್ಟೇ ಮಾಲೀಕ ವಿಶಾಲ್ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದು ಮೂರು ದಿನಗಳ ಕಾಲ ಸಂತ್ರಸ್ತೆ ಯಾರನ್ನೂ ಸಂಪರ್ಕ ಮಾಡದಂತೆ ತಡೆದಿದ್ದ. ಹೋಂ ಸ್ಟೇಯಲ್ಲಿದ್ದ ವೈಫೈಯನ್ನೂ ಕಡಿತ ಮಾಡಿದ್ದ. ಮೂರು ದಿನದ ಬಳಿಕ ಸಂತ್ರಸ್ತ ಯುವತಿ ಮೈಸೂರಿಗೆ ಹೋಗುವುದಾಗಿ ಹೇಳಿ ಹೊರಟಿದ್ದರು. ಮೈಸೂರಿಗೆ ತೆರಳಿದ ನಂತರ ಅಮೆರಿಕದ ರಾಯಭಾರ ಕಚೇರಿಯನ್ನ ಸಂಪರ್ಕಿಸಿ, ಮಾಹಿತಿ ನೀಡಿದ್ದಾರೆ. ಬಳಿಕ ಇ-ಮೇಲ್ ಮೂಲಕ ಮೈಸೂರಿನ ಅಧಿಕಾರಿಗಳನ್ನ ಸಂಪರ್ಕಿಸಿದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳು ಪ್ರಕರಣ ದಾಖಲಿಸಲು ಹೇಳಿದ್ದಾರೆ. ಅಧಿಕಾರಿಗಳ ಸೂಚನೆ ಮೇರೆಗೆ ಮೈಸೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ದೆಹಲಿ ಹಾಗೂ ಚೆನ್ನೈನಿಂದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm