ಬ್ರೇಕಿಂಗ್ ನ್ಯೂಸ್
22-04-26 02:15 pm HK News Staffer ಕ್ರೈಂ
ಮಡಿಕೇರಿ, ಎಪ್ರಿಲ್ 22: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ವಿರಾಜಪೇಟೆ ತಾಲೂಕಿನ ಕುಟ್ಟ ಎಂಬಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ರೆಸಾರ್ಟ್ ಒಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು ಘಟನೆ ಹಿನ್ನೆಲೆಯಲ್ಲಿ ಪೊಲೀಸರು ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಅಮೆರಿಕದ ವಾಷಿಂಗ್ಟನ್ ನಗರದಿಂದ ಪ್ರವಾಸ ಬಂದಿದ್ದ ಮಹಿಳೆಗೆ ಮತ್ತು ಬರುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬ ಕಾರ್ಮಿಕ ಕೃತ್ಯ ಎಸಗಿದವನಾಗಿದ್ದು ಮತ್ತು ಹೋಂಸ್ಟೇ ಮಾಲೀಕ ವಿಶಾಲ್ ಎಂಬ ಇಬ್ಬರನ್ನೂ ಬಂಧಿಸಲಾಗಿದೆ.
ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿದ್ದ ಜಾರ್ಖಂಡ್ ಮೂಲದ ವ್ಯಕ್ತಿ ವೃಜೇಶ್ ಕುಮಾರ್ ಸಿಹಿ ಪಾನಕಕ್ಕೆ ಮತ್ತು ಬರುವ ಔಷಧಿ ಬೆರಸಿ ಮಹಿಳೆಗೆ ನೀಡಿದ್ದಾನೆ. ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಗಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ.
ವಿಷಯ ತಿಳಿದ ಹೋಮ್ಸ್ಟೇ ಮಾಲೀಕ ವಿಶಾಲ್ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದು ಮೂರು ದಿನಗಳ ಕಾಲ ಸಂತ್ರಸ್ತೆ ಯಾರನ್ನೂ ಸಂಪರ್ಕ ಮಾಡದಂತೆ ತಡೆದಿದ್ದ. ಹೋಂ ಸ್ಟೇಯಲ್ಲಿದ್ದ ವೈಫೈಯನ್ನೂ ಕಡಿತ ಮಾಡಿದ್ದ. ಮೂರು ದಿನದ ಬಳಿಕ ಸಂತ್ರಸ್ತ ಯುವತಿ ಮೈಸೂರಿಗೆ ಹೋಗುವುದಾಗಿ ಹೇಳಿ ಹೊರಟಿದ್ದರು. ಮೈಸೂರಿಗೆ ತೆರಳಿದ ನಂತರ ಅಮೆರಿಕದ ರಾಯಭಾರ ಕಚೇರಿಯನ್ನ ಸಂಪರ್ಕಿಸಿ, ಮಾಹಿತಿ ನೀಡಿದ್ದಾರೆ. ಬಳಿಕ ಇ-ಮೇಲ್ ಮೂಲಕ ಮೈಸೂರಿನ ಅಧಿಕಾರಿಗಳನ್ನ ಸಂಪರ್ಕಿಸಿದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳು ಪ್ರಕರಣ ದಾಖಲಿಸಲು ಹೇಳಿದ್ದಾರೆ. ಅಧಿಕಾರಿಗಳ ಸೂಚನೆ ಮೇರೆಗೆ ಮೈಸೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ದೆಹಲಿ ಹಾಗೂ ಚೆನ್ನೈನಿಂದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am