ಬ್ರೇಕಿಂಗ್ ನ್ಯೂಸ್
22-04-26 08:41 pm HK News Staffer ಕ್ರೈಂ
ಪಡುಬಿದ್ರೆ, ಎಪ್ರಿಲ್ 22: ಖಾಸಗಿ ಬಸ್ಸಿನ ಧಾವಂತಕ್ಕೆ ತಂದೆ - ಮಗಳು ಪ್ರಯಾಣಿಸುತ್ತಿದ್ದ ಸ್ಕೂಟರ್ ಸಿಲುಕಿದ್ದರಿಂದ ಎಂಟು ವರ್ಷದ ಪ್ರತಿಭಾನ್ವಿತ ಬಾಲಕಿ ದುರಂತ ಸಾವನ್ನಪ್ಪಿದ ಘಟನೆ ಪಡುಬಿದ್ರೆ ಬಳಿಯ ಕಾಪು ಪೇಟೆಯಲ್ಲಿ ನಡೆದಿದೆ.
ದುಬೈನಲ್ಲಿದ್ದು ಊರಿಗೆ ಮರಳಿದ್ದ ನಿತ್ಯಾನಂದ ಶೆಟ್ಟಿ ಮಗಳ ಜೊತೆಗೆ ಸ್ಕೂಟರಿನಲ್ಲಿ ಕಾಪು ಪೇಟೆಗೆ ಬಂದಿದ್ದರು. ಈ ವೇಳೆ, ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಬಂದ ಉಡುಪಿ- ಮಂಗಳೂರು ಎಕ್ಸ್ಪ್ರೆಸ್ ಬಸ್ ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಇದರಿಂದ ತಂದೆಯೊಂದಿಗೆ ಹಿಂಬದಿ ಕುಳಿತಿದ್ದ ಬಾಲಕಿ ಸ್ವಾತಿ ಶೆಟ್ಟಿ (8) ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾಳೆ. ನಿತ್ಯಾನಂದ ಶೆಟ್ಟಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದುಬೈಯಲ್ಲಿ ವಾಸವಿದ್ದ ನಿತ್ಯಾನಂದ ಶೆಟ್ಟಿ ಮುಂದೆ ಊರಿನಲ್ಲೇ ನೆಲೆಸುವುದಕ್ಕಾಗಿ ಸಿದ್ಧತೆಯಲ್ಲಿದ್ದರು. ಮಗಳು ಸ್ವಾತಿಯನ್ನು ಉಡುಪಿಯ ಖಾಸಗಿ ಶಾಲೆಯಲ್ಲಿ ಸೇರ್ಪಡೆಗೊಳಿಸಿದ್ದರು. ಪತ್ನಿ, ಮಗಳನ್ನು ಬಿಟ್ಟು ಎರಡು ದಿನದಲ್ಲಿ ನಿತ್ಯಾನಂದ ಶೆಟ್ಟಿ ಮಾತ್ರ ದುಬೈಗೆ ತೆರಳುವವರಿದ್ದರು. ಈ ನಡುವೆ, ಕಾಪು ಪೇಟೆಗೆ ಸ್ಕೂಟರ್ ನಲ್ಲಿ ಬಂದು ವಾಪಾಸಾಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ.
ನಿತ್ಯಾನಂದ ಶೆಟ್ಟಿ ಕಾಪು ಬಳಿಯ ಪೂವಣಿಗುತ್ತು ಮನೆ ನಿವಾಸಿಯಾಗಿದ್ದು ಅಲ್ಲಿಂದ ಕೇವಲ ಅರ್ಧ ಕಿ.ಮೀ. ದೂರದಲ್ಲಿ ಅಪಘಾತ ನಡೆದಿದೆ. ಸ್ವಾತಿ ಶೆಟ್ಟಿ ಸಣ್ಣ ವಯಸ್ಸಿನಲ್ಲೇ ಪರಿಸರದಲ್ಲಿ ಆಕರ್ಷಕ ವ್ಯಕ್ತಿತ್ವ ಬೆಳೆಸಿಕೊಂಡಿದ್ದಳು. ಬಂಟರ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಂಧುಗಳ ಗಮನ ಸೆಳೆದಿದ್ದಳು. ಆದರೆ ದುರ್ವಿಧಿ ಬೇರೆಯದ್ದೇ ಬಗೆದಿದ್ದು ಅಪಘಾತದಲ್ಲಿ ಸಾವು ಕಂಡಿದ್ದು ಕುಟುಂಬಸ್ಥರು ಮತ್ತು ಪರಿಸರದ ಜನರಿಗೆ ಆಘಾತ ಮೂಡಿಸಿದೆ. ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದ ಚಾಲನೆಯಿಂದಾಗಿ ಘಟನೆ ನಡೆದಿದ್ದು ಕಾಪು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm