ಬ್ರೇಕಿಂಗ್ ನ್ಯೂಸ್
24-04-26 04:37 pm HK News Staffer ಕ್ರೈಂ
ಬೆಳ್ತಂಗಡಿ, ಎಪ್ರಿಲ್ 24: ಯುವಕನೊಬ್ಬ ತಡರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದೇವರ ಮೂರ್ತಿ ಭಗ್ನಗೊಳಿಸಿದ ಘಟನೆ ವೇಣೂರು ಬಳಿಯ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ.
ಬುಧವಾರ ನಸುಕಿನ ಜಾವ ಎರಡು ಗಂಟೆ ವೇಳೆಗೆ ಘಟನೆ ನಡೆದಿದ್ದು ಕೃತ್ಯ ಎಸಗಿದವನನ್ನು ಯಶಸ್ (28) ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆ ಸಂಬಂಧಪಟ್ಟ ವ್ಯಕ್ತಿಯೊಬ್ಬರ ಮಗನಾಗಿರುವ ಈತ ಮನೆಯಲ್ಲಿ ಜಗಳ ಮಾಡಿಕೊಂಡು ಕೆಲವೊಮ್ಮೆ ದೇವಸ್ಥಾನದಲ್ಲೇ ಇರುತ್ತಿದ್ದನಂತೆ. ತಡರಾತ್ರಿ ಏಕಾಏಕಿ ಕಪ್ಪು ಬಣ್ಣದ ಥಾರ್ ಜೀಪ್ ನಲ್ಲಿ ಬಂದಿದ್ದು ವಾಹನವನ್ನು ದೇವಸ್ಥಾನ ಪಕ್ಕದ ಸುಬ್ರಹ್ಮಣ್ಯ ಭಟ್ ಎಂಬವರ ಮನೆಯ ಮುಂದೆ ನಿಲ್ಲಿಸಿದ್ದ.
ಬಳಿಕ 'ಎನನ್ ಬಚಾವ್ ಮಲ್ಪಿ' (ನನ್ನನ್ನು ರಕ್ಷಿಸಿ) ಎಂದು ತುಳುವಿನಲ್ಲಿ ಜೋರಾಗಿ ಕೂಗಾಡುತ್ತ ಅವರ ಮನೆಗೆ ನುಗ್ಗಲು ಯತ್ನಿಸಿದ್ದು ಆನಂತರ ಬಳಂಜ ದೇವಸ್ಥಾನಕ್ಕೆ ಸೇರಿದ ದೇವರ ಜಲಕದ ಕೆರೆಗೆ ಹಾರಿದ್ದ. ಅಲ್ಲಿಂದ ದೇವಸ್ಥಾನದ ಕಂಬದ ಮೂಲಕ ಮೇಲೆ ಹತ್ತಿ ಹಂಚು ತೆಗೆದು ದೇಗುಲದ ಒಳನುಗ್ಗಿದ್ದ. ಆನಂತರ, ಕೊಡಮಣಿತ್ತಾಯ ದೈವದ ಗುಡಿಗೆ ಇಳಿದು ಮಣೆ ಮಂಚದಲ್ಲಿದ್ದ ಘಂಟಾಮಣಿಯನ್ನು ತೆಗೆದು ಹೊರಗೆ ಎಸೆದಿದ್ದಾನೆ.


ಅಲ್ಲಿಂದ ದೇವಸ್ಥಾನದ ಗೋಪಾಲಕೃಷ್ಣ ದೇವರ ಗುಡಿಯೊಳಗೆ ನುಗ್ಗಿ ದೇವರ ವಿಗ್ರಹವನ್ನೂ ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾನೆ. ಗುಡಿಯೊಳಗಿದ್ದ ದೇವರ ಪರಿಕರಗಳನ್ನು ಎಸೆದು ವಿಕೃತವಾಗಿ ವರ್ತಿಸಿದ್ದಾನೆ. ಆಬಳಿಕ ವಾಹನವನ್ನು ಸುಬ್ರಹ್ಮಣ್ಯ ಭಟ್ ಅವರ ಮನೆಯಂಗಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಘಟನೆಯ ಬಗ್ಗೆ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೇವಸ್ಥಾನಕ್ಕೆ ಸಂಬಂಧಪಟ್ಟವರು ಆತನಿಗೆ ಸ್ವಲ್ಪ ಮಾನಸಿಕ ಅಸ್ವಸ್ಥತೆ ಇದೆಯೆಂದು ಹೇಳುತ್ತಿದ್ದಾರೆ. ಇಂಜಿನಿಯರಿಂಗ್ ಮುಗಿಸಿ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದ ಯಶಸ್ ದಿಢೀರ್ ಆಗಿ ವಿಕೃತವಾಗಿ ವರ್ತಿಸಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ. ವೇಣೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm