ಬ್ರೇಕಿಂಗ್ ನ್ಯೂಸ್
25-04-26 12:55 pm HK News Staffer ಕ್ರೈಂ
ಕಾರ್ಕಳ, ಏಪ್ರಿಲ್ 25: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಸಾವನ್ನಪ್ಪಿ, ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ–ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಗ್ರಾಮದ ‘ನಿಟ್ಟೆ ಫಾರ್ ಎವರ್’ ಹೋಟೆಲ್ ಮುಂಭಾಗ ನಡೆದಿದೆ.
ಕಾರ್ಕಳ ನಿವಾಸಿ ನವೀನ್ ಚಂದ್ರ (45) ಅವರು ತಮ್ಮ ಮಗಳು ಪ್ರೇರಣಾಳನ್ನ ಬೈಕ್ನಲ್ಲಿ ಕೂರಿಸಿಕೊಂಡು ನಿಟ್ಟೆ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದರು. ಈ ವೇಳೆ ಎದುರು ದಿಕ್ಕಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಚಲಿಸಿ, ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ತೀವ್ರವಾಗಿ ಗಾಯಗೊಂಡ ನವೀನ್ ಚಂದ್ರ ಅವರನ್ನು ತಕ್ಷಣ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪ್ರೇರಣಾ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಎಂ.ಸಿ ಆಸ್ಪತ್ರೆ ಗೆ ಸ್ಥಳಾಂತರಿಸಲಾಗಿದೆ.
ಘಟನೆ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಕಾರಿನಲ್ಲಿದ್ದವರು ನಿಟ್ಟೆ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ನಿಟ್ಟೆ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಿತಿಮೀರಿದ ವೇಗದಲ್ಲಿ ಕಾರು, ಬೈಕ್ ಚಲಾಯಿಸುತ್ತಿದ್ದು ಈ ಹಿಂದೆಯೂ ಅನೇಕ ಬಾರಿ ಅಪಘಾತವನ್ನುಂಟು ಮಾಡಿದ್ದಾರೆ. ನಿಟ್ಟೆ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಬೇಜವಾಬ್ದಾರಿ ಚಾಲನೆ, ಮೋಜು ಮಸ್ತಿಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಕಳೆದ ಬಾರಿ ಅತ್ತೂರು ಹಾಗೂ ಬೆಳ್ಳಣ್ ನಲ್ಲಿ ಸಂಭವಿಸಿದ ಅಪಘಾತಕ್ಕೂ ನಿಟ್ಟೆ ಇಂಜಿನೀಯರಿಂಗ್ ವಿದ್ಯಾರ್ಥಿಗಳೇ ಕಾರಣರಾಗಿದ್ದರು. ವಿದ್ಯಾರ್ಥಿಗಳ ವೇಗಕ್ಕೆ ಕಡಿವಾಣ ಅವಶ್ಯ ಎಂದು ಸಾರ್ವಜನಿಕ ವಲಯದಿಂದ ಅಭಿಪ್ರಾಯ ಕೇಳಿಬರುತ್ತಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm