ಬ್ರೇಕಿಂಗ್ ನ್ಯೂಸ್
25-04-26 12:55 pm HK News Staffer ಕ್ರೈಂ
ಕಾರ್ಕಳ, ಏಪ್ರಿಲ್ 25: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಸಾವನ್ನಪ್ಪಿ, ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ–ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಗ್ರಾಮದ ‘ನಿಟ್ಟೆ ಫಾರ್ ಎವರ್’ ಹೋಟೆಲ್ ಮುಂಭಾಗ ನಡೆದಿದೆ.
ಕಾರ್ಕಳ ನಿವಾಸಿ ನವೀನ್ ಚಂದ್ರ (45) ಅವರು ತಮ್ಮ ಮಗಳು ಪ್ರೇರಣಾಳನ್ನ ಬೈಕ್ನಲ್ಲಿ ಕೂರಿಸಿಕೊಂಡು ನಿಟ್ಟೆ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದರು. ಈ ವೇಳೆ ಎದುರು ದಿಕ್ಕಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಚಲಿಸಿ, ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ತೀವ್ರವಾಗಿ ಗಾಯಗೊಂಡ ನವೀನ್ ಚಂದ್ರ ಅವರನ್ನು ತಕ್ಷಣ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪ್ರೇರಣಾ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಎಂ.ಸಿ ಆಸ್ಪತ್ರೆ ಗೆ ಸ್ಥಳಾಂತರಿಸಲಾಗಿದೆ.
ಘಟನೆ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಕಾರಿನಲ್ಲಿದ್ದವರು ನಿಟ್ಟೆ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ನಿಟ್ಟೆ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಿತಿಮೀರಿದ ವೇಗದಲ್ಲಿ ಕಾರು, ಬೈಕ್ ಚಲಾಯಿಸುತ್ತಿದ್ದು ಈ ಹಿಂದೆಯೂ ಅನೇಕ ಬಾರಿ ಅಪಘಾತವನ್ನುಂಟು ಮಾಡಿದ್ದಾರೆ. ನಿಟ್ಟೆ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಬೇಜವಾಬ್ದಾರಿ ಚಾಲನೆ, ಮೋಜು ಮಸ್ತಿಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಕಳೆದ ಬಾರಿ ಅತ್ತೂರು ಹಾಗೂ ಬೆಳ್ಳಣ್ ನಲ್ಲಿ ಸಂಭವಿಸಿದ ಅಪಘಾತಕ್ಕೂ ನಿಟ್ಟೆ ಇಂಜಿನೀಯರಿಂಗ್ ವಿದ್ಯಾರ್ಥಿಗಳೇ ಕಾರಣರಾಗಿದ್ದರು. ವಿದ್ಯಾರ್ಥಿಗಳ ವೇಗಕ್ಕೆ ಕಡಿವಾಣ ಅವಶ್ಯ ಎಂದು ಸಾರ್ವಜನಿಕ ವಲಯದಿಂದ ಅಭಿಪ್ರಾಯ ಕೇಳಿಬರುತ್ತಿದೆ.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
25-04-26 01:45 pm
HK News Staffer
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
25-04-26 02:05 pm
HK News Staffer
ಕಾರ್ಕಳ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಬೈಕ್ ಗೆ ಡಿಕ...
25-04-26 12:55 pm
ವೇಣೂರು ; ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ಮೂರ್ತಿ...
24-04-26 04:37 pm
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm