ಬ್ರೇಕಿಂಗ್ ನ್ಯೂಸ್
25-04-26 02:05 pm HK News Staffer ಕ್ರೈಂ
ಉಡುಪಿ, ಏಪ್ರಿಲ್ 25: ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಘಟನೆ ತಡರಾತ್ರಿ ನಡೆದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೈಡ್ರಾಮಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ದೇಶದ ವಿವಿಧ ಭಾಗಗಳಿಂದ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಮಣಿಪಾಲಕ್ಕೆ ಆಗಮಿಸುತ್ತಾರೆ. ಆದರೆ, ಹೈಟೆಕ್ ವಾತಾವರಣ ಮತ್ತು ಪಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಕೆಲವರು ಸಾರ್ವಜನಿಕ ಸ್ಥಳ ಎಂಬ ಅರಿವಿಲ್ಲದೆ ವರ್ತಿಸುತ್ತಿರುವುದು ಸ್ಥಳೀಯರಲ್ಲಿ ಅಸಮಾಧಾನ ಹುಟ್ಟಿಸಿದೆ. ಇದೇ ರೀತಿ ಸಾರ್ವಜನಿಕ ರಸ್ತೆಯಲ್ಲೇ ಪ್ರಣಯ ಸಲ್ಲಾಪದಲ್ಲಿ ತೊಡಗಿದ್ದ ಈ ಜೋಡಿಯನ್ನು ಕಂಡ ಸ್ಥಳೀಯರು ತಕ್ಷಣವೇ ತರಾಟೆಗೆ ತೆಗೆದುಕೊಂಡಿದ್ದಾರೆ.
ಸ್ಥಳೀಯರು ಪ್ರಶ್ನಿಸಿದ ವೇಳೆ ಜೋಡಿ ಅಸಹಜವಾಗಿ ಪ್ರತಿಕ್ರಿಯಿಸಿದ್ದು, ಮಾತಿನ ಚಕಮಕಿಯೂ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್ಗಳಲ್ಲಿ ಸೆರೆಹಿಡಿದು ಹಂಚಿಕೊಂಡಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ಹೊಸ ವರ್ಷ ಅಥವಾ ವ್ಯಾಲೆಂಟೈನ್ಸ್ ಡೇ ಸಂದರ್ಭಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ ಎಂಬ ಅಸಮಾಧಾನ ವ್ಯಕ್ತಪಡಿಸಿರುವ ಉಡುಪಿ ಜನತೆ, ಮಣಿಪಾಲದ ಗೌರವಕ್ಕೆ ಧಕ್ಕೆಯಾಗುವಂತಹ ವರ್ತನೆಗಳನ್ನು ತಕ್ಷಣವೇ ನಿಯಂತ್ರಿಸಬೇಕು ಎಂದು ಆಗ್ರಹಿಸಿದ್ದಾರೆ. ಇಂತಹ ಘಟನೆಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.
ಸಾರ್ವಜನಿಕ ಸ್ಥಳದಲ್ಲಿ ಸ್ವಾತಂತ್ರ್ಯಕ್ಕಿಂತ ಜವಾಬ್ದಾರಿ ಮುಖ್ಯ. ಮಣಿಪಾಲದ ಈ ಘಟನೆ ಸಮಾಜದ ಮಿತಿಗಳ ಕುರಿತು ಮತ್ತೆ ಚರ್ಚೆ ಎಬ್ಬಿಸಿದೆ.
Shocking & unacceptable! A couple caught indulging in highly indecent behavior in public in Manipal. This is not PDA, this is openly disrespecting Indian culture, public decency, and the people around.
— ಸನಾತನ (सनातन) (@sanatan_kannada) April 24, 2026
Manipal is an education hub students & families deserve better. Where are the… pic.twitter.com/8zJ9n9AsLo
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
25-04-26 03:54 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
25-04-26 01:45 pm
HK News Staffer
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
25-04-26 03:57 pm
HK News Staffer
ಮಣಿಪಾಲದಲ್ಲಿ ಪಬ್ಲಿಕ್ನಲ್ಲೇ ವಿದ್ಯಾರ್ಥಿಗಳ ಓಪನ್ ರೋ...
25-04-26 02:05 pm
ಕಾರ್ಕಳ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಬೈಕ್ ಗೆ ಡಿಕ...
25-04-26 12:55 pm
ವೇಣೂರು ; ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ಮೂರ್ತಿ...
24-04-26 04:37 pm
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm