ಉಡುಪಿ ; ಸಂಸ್ಕೃತ ಕಾಲೇಜಿನ ಉಪನ್ಯಾಸಕ‌ ಬಾವಿಯಲ್ಲಿ ಶವವಾಗಿ ಪತ್ತೆ

25-04-26 03:57 pm       HK News Staffer   ಕ್ರೈಂ

ಇಲ್ಲಿನ ಎಂ.ಜಿ.ಎಂ ಕಾಲೇಜು ಬಳಿ ಬಾಡಿಗೆ ಮನೆಯಲ್ಲಿದ್ದು ದಿಢೀರ್ ನಾಪತ್ತೆಯಾಗಿದ್ದ ಸಂಸ್ಕೃತ ಕಾಲೇಜಿನ ಉಪನ್ಯಾಸಕರೊಬ್ಬರ ಶವ ಅದೇ ಪರಿಸರದ ಬಾವಿಯಲ್ಲಿ ಪತ್ತೆಯಾಗಿದೆ. ಶಿರಸಿ ಮೂಲದ ಸಂಸ್ಕೃತ ಉಪನ್ಯಾಸಕ ಗಣಪತಿ ಭಟ್ (55) ಮೃತರು.‌

ಉಡುಪಿ, ಎಪ್ರಿಲ್ 25: ಇಲ್ಲಿನ ಎಂ.ಜಿ.ಎಂ ಕಾಲೇಜು ಬಳಿ ಬಾಡಿಗೆ ಮನೆಯಲ್ಲಿದ್ದು ದಿಢೀರ್ ನಾಪತ್ತೆಯಾಗಿದ್ದ ಸಂಸ್ಕೃತ ಕಾಲೇಜಿನ ಉಪನ್ಯಾಸಕರೊಬ್ಬರ ಶವ ಅದೇ ಪರಿಸರದ ಬಾವಿಯಲ್ಲಿ ಪತ್ತೆಯಾಗಿದೆ. ಶಿರಸಿ ಮೂಲದ ಸಂಸ್ಕೃತ ಉಪನ್ಯಾಸಕ ಗಣಪತಿ ಭಟ್ (55) ಮೃತರು.‌

ಅವಿವಾಹಿತರಾಗಿದ್ದ ಇವರು ಮನೆ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇವರ ನಾಪತ್ತೆ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವಿವಾಹಿತರಾಗಿದ್ದ ಇವರು ನಗರದ ಎಸ್ಎಂಎಸ್ ಪಿ ಸಂಸ್ಕೃತ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು ಎಂ.ಜಿ.ಎಂ ಕಾಲೇಜಿನ ಬಳಿ ಬಾಡಿಗೆಯಲ್ಲಿ ವಾಸವಿದ್ದರು. 

ಇಂದು ಬೆಳಗ್ಗೆ ಬಾವಿಯಲ್ಲಿ ಶವ ಪತ್ತೆಯಾಗಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ‌ಅಗ್ನಿಶಾಮಕ ಸಿಬಂದಿ ಮತ್ತು ಸಮಾಜಸೇವಕ ನಿತ್ಯಾನಂದ ಒಳಕಾಡು ಸೇರಿ ಬಾವಿಯಿಂದ ಶವ ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.