ಬ್ರೇಕಿಂಗ್ ನ್ಯೂಸ್
25-04-26 10:43 pm Mangalore Correspondent ಕ್ರೈಂ
ಮಂಗಳೂರು, ಎಪ್ರಿಲ್ 25: ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳೆಂದು ಫೋನ್ ಕರೆ ಮಾಡಿದ ಸೈಬರ್ ವಂಚಕರು ಮಂಗಳೂರಿನ 61 ವರ್ಷದ ವ್ಯಕ್ತಿಯೊಬ್ಬರಿಗೆ 2.07 ಕೋಟಿ ರೂಪಾಯಿ ವಂಚಿಸಿದ ಘಟನೆ ನಡೆದಿದೆ.
ಮಾರ್ಚ್ 31ರಂದು ಸಂತ್ರಸ್ತರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ‘ನ್ಯಾಷನಲ್ ಡೇಟಾ ಪ್ರೊಟೆಕ್ಷನ್ ಸೆಂಟರ್’ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. “ನಿಮ್ಮ ಗುರುತಿನ ಚೀಟಿ ಬಳಸಿ ಮುಂಬೈನಲ್ಲಿ ಸಿಮ್ ಕಾರ್ಡ್ ಖರೀದಿಸಲಾಗಿದೆ. ಅದರ ಮೂಲಕ ಅಶ್ಲೀಲ ವೀಡಿಯೊ ರವಾನೆ ಹಾಗೂ ಡ್ರಗ್ಸ್ ದಂಧೆ ನಡೆಸಲಾಗುತ್ತಿದೆ. ನಿಮ್ಮ ಮೇಲೆ ಮುಂಬೈನ ಕೊಲಾಬಾ ಠಾಣೆಯಲ್ಲಿ 50ಕ್ಕೂ ಹೆಚ್ಚು ಎಫ್ಐಆರ್ ದಾಖಲಾಗಿವೆ ಎಂದು ಹೇಳಿ ಬೆದರಿಸಿದ್ದಾನೆ.
ಬಳಿಕ ಎನ್ಐಎ ಅಧಿಕಾರಿ ಸಂದೀಪ್ ರಾವ್, ಎಡಿಜಿಪಿ ಮ್ಯಾಥ್ಯೂ ಮತ್ತು ಇಡಿ ಅಧಿಕಾರಿ ವಿಲಾಸ್ ರಾವ್ ಪಟೇಲ್ ಎಂಬ ಹೆಸರಿನಲ್ಲಿ ವಂಚಕರು ವಾಟ್ಸಪ್ ಕರೆ ಮಾಡಿದ್ದು ಸಂತ್ರಸ್ತ ವ್ಯಕ್ತಿಯನ್ನು ಭಯಭೀತರನ್ನಾಗಿಸಿದ್ದಾರೆ. ನೀವು ದೊಡ್ಡ ಕ್ರಿಮಿನಲ್, ಭಯೋತ್ಪಾದಕ ಚಟುವಟಿಕೆಯಲ್ಲಿ ನಿಮ್ಮ ಹೆಸರಿದೆ ಎಂದು ಹೆದರಿಸಿ ಪ್ರಕರಣದಿಂದ ಮುಕ್ತನಾಗಲು ಹಣವನ್ನು ಬೇರೆ ಖಾತೆಗಳಲ್ಲಿ ಡಿಪಾಸಿಟ್ ಇಡುವಂತೆ ಬೇಡಿಕೆ ಇಟ್ಟಿದ್ದಾರೆ.
ಇದರಿಂದ ಹೆದರಿದ ಸಂತ್ರಸ್ತ ವ್ಯಕ್ತಿ ಹಣ ಡಿಪಾಸಿಟ್ ಮಾಡಲು ಮುಂದಾಗಿದ್ದು ಏಪ್ರಿಲ್ 7ರಿಂದ 18ರ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಹಣ ರವಾನಿಸಿದ್ದಾರೆ. ಒಟ್ಟು ₹2,07,04,600 ಹಣವನ್ನು ಆನ್ಲೈನ್ ಮೂಲಕ ವರ್ಗಾಯಿಸಿದ್ದು ಆನಂತರ ಹಣ ಕೇಳಿದಾಗ, ಹಣ ಹಿಂತಿರುಗಿ ಬರಲಿಲ್ಲ. ಕೊನೆಗೆ ತಾನು ಮೋಸ ಹೋಗಿರುವ ಸಂಶಯದಲ್ಲಿ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
06-06-26 12:49 pm
HK News Staffer
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
ಡಿಕೆಶಿ ಸಂಪುಟದಲ್ಲಿ ಮೊದಲ ವಿಕೆಟ್ ಪತನ ; ಖಾತೆ ಹಂಚಿ...
05-06-26 10:29 am
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
05-06-26 01:25 pm
HK News Staffer
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
06-06-26 09:01 pm
HK News Staffer
ನ್ಯಾಯಾಲಯದ ವಾರಂಟ್ ತಪ್ಪಿಸಿ ತಲೆಮರೆಸಿಕೊಂಡಿದ್ದ ಇಬ್...
06-06-26 05:04 pm
ಐಸಿಸ್ ಉಗ್ರನೊಂದಿಗೆ ಸಂಪರ್ಕ; ತುಮಕೂರಿನಲ್ಲಿ ಇಬ್ಬರ...
06-06-26 04:59 pm
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; ವಿದ...
06-06-26 01:18 pm
ಮೆಲ್ಕಾರ್ ಫ್ಲೈಓವರ್ ಬಳಿ ಡ್ರಗ್ಸ್ ಬೇಟೆ ; 7.64 ಲಕ್...
05-06-26 09:58 pm