ಬ್ರೇಕಿಂಗ್ ನ್ಯೂಸ್
25-04-26 10:43 pm Mangalore Correspondent ಕ್ರೈಂ
ಮಂಗಳೂರು, ಎಪ್ರಿಲ್ 25: ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳೆಂದು ಫೋನ್ ಕರೆ ಮಾಡಿದ ಸೈಬರ್ ವಂಚಕರು ಮಂಗಳೂರಿನ 61 ವರ್ಷದ ವ್ಯಕ್ತಿಯೊಬ್ಬರಿಗೆ 2.07 ಕೋಟಿ ರೂಪಾಯಿ ವಂಚಿಸಿದ ಘಟನೆ ನಡೆದಿದೆ.
ಮಾರ್ಚ್ 31ರಂದು ಸಂತ್ರಸ್ತರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ‘ನ್ಯಾಷನಲ್ ಡೇಟಾ ಪ್ರೊಟೆಕ್ಷನ್ ಸೆಂಟರ್’ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. “ನಿಮ್ಮ ಗುರುತಿನ ಚೀಟಿ ಬಳಸಿ ಮುಂಬೈನಲ್ಲಿ ಸಿಮ್ ಕಾರ್ಡ್ ಖರೀದಿಸಲಾಗಿದೆ. ಅದರ ಮೂಲಕ ಅಶ್ಲೀಲ ವೀಡಿಯೊ ರವಾನೆ ಹಾಗೂ ಡ್ರಗ್ಸ್ ದಂಧೆ ನಡೆಸಲಾಗುತ್ತಿದೆ. ನಿಮ್ಮ ಮೇಲೆ ಮುಂಬೈನ ಕೊಲಾಬಾ ಠಾಣೆಯಲ್ಲಿ 50ಕ್ಕೂ ಹೆಚ್ಚು ಎಫ್ಐಆರ್ ದಾಖಲಾಗಿವೆ ಎಂದು ಹೇಳಿ ಬೆದರಿಸಿದ್ದಾನೆ.
ಬಳಿಕ ಎನ್ಐಎ ಅಧಿಕಾರಿ ಸಂದೀಪ್ ರಾವ್, ಎಡಿಜಿಪಿ ಮ್ಯಾಥ್ಯೂ ಮತ್ತು ಇಡಿ ಅಧಿಕಾರಿ ವಿಲಾಸ್ ರಾವ್ ಪಟೇಲ್ ಎಂಬ ಹೆಸರಿನಲ್ಲಿ ವಂಚಕರು ವಾಟ್ಸಪ್ ಕರೆ ಮಾಡಿದ್ದು ಸಂತ್ರಸ್ತ ವ್ಯಕ್ತಿಯನ್ನು ಭಯಭೀತರನ್ನಾಗಿಸಿದ್ದಾರೆ. ನೀವು ದೊಡ್ಡ ಕ್ರಿಮಿನಲ್, ಭಯೋತ್ಪಾದಕ ಚಟುವಟಿಕೆಯಲ್ಲಿ ನಿಮ್ಮ ಹೆಸರಿದೆ ಎಂದು ಹೆದರಿಸಿ ಪ್ರಕರಣದಿಂದ ಮುಕ್ತನಾಗಲು ಹಣವನ್ನು ಬೇರೆ ಖಾತೆಗಳಲ್ಲಿ ಡಿಪಾಸಿಟ್ ಇಡುವಂತೆ ಬೇಡಿಕೆ ಇಟ್ಟಿದ್ದಾರೆ.
ಇದರಿಂದ ಹೆದರಿದ ಸಂತ್ರಸ್ತ ವ್ಯಕ್ತಿ ಹಣ ಡಿಪಾಸಿಟ್ ಮಾಡಲು ಮುಂದಾಗಿದ್ದು ಏಪ್ರಿಲ್ 7ರಿಂದ 18ರ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಹಣ ರವಾನಿಸಿದ್ದಾರೆ. ಒಟ್ಟು ₹2,07,04,600 ಹಣವನ್ನು ಆನ್ಲೈನ್ ಮೂಲಕ ವರ್ಗಾಯಿಸಿದ್ದು ಆನಂತರ ಹಣ ಕೇಳಿದಾಗ, ಹಣ ಹಿಂತಿರುಗಿ ಬರಲಿಲ್ಲ. ಕೊನೆಗೆ ತಾನು ಮೋಸ ಹೋಗಿರುವ ಸಂಶಯದಲ್ಲಿ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm