ಬ್ರೇಕಿಂಗ್ ನ್ಯೂಸ್
26-04-26 12:45 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 26: ಮದುವೆ ಸಂಭ್ರಮದ ನಡುವೆ ಖದೀಮರು ಕೈಚಳಕ ತೋರಿಸಿ ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರುನಲ್ಲಿ ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ವೈದ್ಯೆ ಸಿರುವೆಲ್ಲ ಶ್ರೀದೇವಿ ಅವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲೇ ದೋಚಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಿರುವೆಲ್ಲ ಶ್ರೀದೇವಿ ಅವರು ತಮ್ಮ ಸಹೋದರನ ಮಗನ ಮದುವೆಗೆ ಏಪ್ರಿಲ್ 18ರಂದು ಬೆಂಗಳೂರಿಗೆ ಆಗಮಿಸಿದ್ದರು. ಬಳ್ಳಾರಿ ರಸ್ತೆಯ ಗಂಗಾನಗರದಲ್ಲಿರುವ ತಮ್ಮ ಸಹೋದರರ ಮನೆಯಲ್ಲಿ ತಂಗಿದ್ದ ಅವರು, ಬುಧವಾರ ಬೆಳಗ್ಗೆ ಬಿಡರಹಳ್ಳಿಯ ಓಲ್ಡ್ ಮದ್ರಾಸ್ ರಸ್ತೆಯ ಎಸ್ಡಿಪಿ ಪ್ಯಾಲೆಸ್ ಮಂಟಪಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಅವರ ಸಹೋದರರು ಚಿನ್ನಾಭರಣಗಳಿದ್ದ ಪೆಟ್ಟಿಗೆಯನ್ನು ಮಂಟಪದಲ್ಲೇ ನೀಡಿದ್ದರು. ಕೆಲವು ಆಭರಣಗಳನ್ನು ಧರಿಸಿದ ಅವರು ಉಳಿದವುಗಳನ್ನು ಕೊಠಡಿಯಲ್ಲಿ ಇಟ್ಟು ಬಾಗಿಲು ಲಾಕ್ ಮಾಡಿ ಸ್ವಾಗತ ಕಾರ್ಯಕ್ರಮಕ್ಕೆ ತೆರಳಿದ್ದರು.
ಆದರೆ ಕೊಠಡಿ ಲಾಕ್ ಆಗಿದ್ದರೂ ಸುಮಾರು 725 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೀಲಿ ದೂರುದಾರರಲ್ಲೇ ಇದ್ದುದರಿಂದ, ಪರಿಚಿತರಾದವರು ಅಥವಾ ಕುಟುಂಬದವರಲ್ಲಿ ಯಾರಾದರೂ ಈ ಕೃತ್ಯ ಎಸಗಿರುವ ಸಾಧ್ಯತೆಯೂ ಪೊಲೀಸ್ ವಲಯದಲ್ಲಿ ವ್ಯಕ್ತವಾಗಿದೆ.
ಘಟನೆಯ ಕುರಿತು ದೂರು ದಾಖಲಿಸಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಕೊಠಡಿಗೆ ಪ್ರವೇಶ ಹೊಂದಿದ್ದವರ ವಿಚಾರಣೆ ನಡೆಸುತ್ತಿದ್ದಾರೆ. ಮಂಟಪದ ಸಿಬ್ಬಂದಿಯ ಪಾತ್ರ ಇಲ್ಲ ಎಂದು ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದು, ತನಿಖೆಗೆ ಸಹಕರಿಸುತ್ತಿದ್ದಾರೆ.
ಈ ಕುರಿತು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಆದಾವತ್ ಮಾಹಿತಿ ನೀಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
06-06-26 12:49 pm
HK News Staffer
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
ಡಿಕೆಶಿ ಸಂಪುಟದಲ್ಲಿ ಮೊದಲ ವಿಕೆಟ್ ಪತನ ; ಖಾತೆ ಹಂಚಿ...
05-06-26 10:29 am
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
05-06-26 01:25 pm
HK News Staffer
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
06-06-26 09:01 pm
HK News Staffer
ನ್ಯಾಯಾಲಯದ ವಾರಂಟ್ ತಪ್ಪಿಸಿ ತಲೆಮರೆಸಿಕೊಂಡಿದ್ದ ಇಬ್...
06-06-26 05:04 pm
ಐಸಿಸ್ ಉಗ್ರನೊಂದಿಗೆ ಸಂಪರ್ಕ; ತುಮಕೂರಿನಲ್ಲಿ ಇಬ್ಬರ...
06-06-26 04:59 pm
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; ವಿದ...
06-06-26 01:18 pm
ಮೆಲ್ಕಾರ್ ಫ್ಲೈಓವರ್ ಬಳಿ ಡ್ರಗ್ಸ್ ಬೇಟೆ ; 7.64 ಲಕ್...
05-06-26 09:58 pm