ಬ್ರೇಕಿಂಗ್ ನ್ಯೂಸ್
26-04-26 09:23 pm HK News Staffer ಕ್ರೈಂ
ಬೆಳ್ತಂಗಡಿ, ಏಪ್ರಿಲ್ 26: ಅಪಾಯಕಾರಿ ತಿರುವುಗಳಲ್ಲಿ ಒಂದಾದ ಚಾರ್ಮಾಡಿ ಘಾಟಿಯಲ್ಲಿ ಮತ್ತೊಂದು ಭಾರೀ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆತಂಕ ಮೂಡಿಸಿದೆ. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ನಡೆದ ಈ ಅವಘಡದಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಧರ್ಮಸ್ಥಳದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮೂಡಿಗೆರೆಯತ್ತ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದೆ. ಘಾಟಿಯ ತೀವ್ರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾಗಿರುವುದರಿಂದ ಬಸ್ ಪ್ರಪಾತಕ್ಕೆ ಉರುಳುವ ಭೀಕರ ಅಪಾಯವಿದ್ದರೂ, ಅದೃಷ್ಟವಶಾತ್ ರಸ್ತೆಯಲ್ಲೇ ಪಲ್ಟಿಯಾದ ಕಾರಣ ದೊಡ್ಡ ದುರಂತ ತಪ್ಪಿದಂತಾಗಿದೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 25 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪಲ್ಟಿಯಾದ ಬಸ್ಸನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಗಿದೆ.
ಪ್ರಾಥಮಿಕವಾಗಿ, ಘಾಟಿಯ ಕಡಿದಾದ ತಿರುವುಗಳಲ್ಲಿ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
06-06-26 12:49 pm
HK News Staffer
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
ಡಿಕೆಶಿ ಸಂಪುಟದಲ್ಲಿ ಮೊದಲ ವಿಕೆಟ್ ಪತನ ; ಖಾತೆ ಹಂಚಿ...
05-06-26 10:29 am
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
05-06-26 01:25 pm
HK News Staffer
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
06-06-26 09:01 pm
HK News Staffer
ನ್ಯಾಯಾಲಯದ ವಾರಂಟ್ ತಪ್ಪಿಸಿ ತಲೆಮರೆಸಿಕೊಂಡಿದ್ದ ಇಬ್...
06-06-26 05:04 pm
ಐಸಿಸ್ ಉಗ್ರನೊಂದಿಗೆ ಸಂಪರ್ಕ; ತುಮಕೂರಿನಲ್ಲಿ ಇಬ್ಬರ...
06-06-26 04:59 pm
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; ವಿದ...
06-06-26 01:18 pm
ಮೆಲ್ಕಾರ್ ಫ್ಲೈಓವರ್ ಬಳಿ ಡ್ರಗ್ಸ್ ಬೇಟೆ ; 7.64 ಲಕ್...
05-06-26 09:58 pm