ಬ್ರೇಕಿಂಗ್ ನ್ಯೂಸ್
26-04-26 09:23 pm HK News Staffer ಕ್ರೈಂ
ಬೆಳ್ತಂಗಡಿ, ಏಪ್ರಿಲ್ 26: ಅಪಾಯಕಾರಿ ತಿರುವುಗಳಲ್ಲಿ ಒಂದಾದ ಚಾರ್ಮಾಡಿ ಘಾಟಿಯಲ್ಲಿ ಮತ್ತೊಂದು ಭಾರೀ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆತಂಕ ಮೂಡಿಸಿದೆ. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ನಡೆದ ಈ ಅವಘಡದಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಧರ್ಮಸ್ಥಳದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮೂಡಿಗೆರೆಯತ್ತ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದೆ. ಘಾಟಿಯ ತೀವ್ರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾಗಿರುವುದರಿಂದ ಬಸ್ ಪ್ರಪಾತಕ್ಕೆ ಉರುಳುವ ಭೀಕರ ಅಪಾಯವಿದ್ದರೂ, ಅದೃಷ್ಟವಶಾತ್ ರಸ್ತೆಯಲ್ಲೇ ಪಲ್ಟಿಯಾದ ಕಾರಣ ದೊಡ್ಡ ದುರಂತ ತಪ್ಪಿದಂತಾಗಿದೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 25 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪಲ್ಟಿಯಾದ ಬಸ್ಸನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಗಿದೆ.
ಪ್ರಾಥಮಿಕವಾಗಿ, ಘಾಟಿಯ ಕಡಿದಾದ ತಿರುವುಗಳಲ್ಲಿ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 08:41 pm
HK News Staffer
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm
Shivanand Neelannavar 4500 Fraud: ಶಿವಂ ಅಸೋಸಿಯ...
16-05-26 10:24 pm