ಬ್ರೇಕಿಂಗ್ ನ್ಯೂಸ್
26-04-26 09:23 pm HK News Staffer ಕ್ರೈಂ
ಬೆಳ್ತಂಗಡಿ, ಏಪ್ರಿಲ್ 26: ಅಪಾಯಕಾರಿ ತಿರುವುಗಳಲ್ಲಿ ಒಂದಾದ ಚಾರ್ಮಾಡಿ ಘಾಟಿಯಲ್ಲಿ ಮತ್ತೊಂದು ಭಾರೀ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆತಂಕ ಮೂಡಿಸಿದೆ. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ನಡೆದ ಈ ಅವಘಡದಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಧರ್ಮಸ್ಥಳದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮೂಡಿಗೆರೆಯತ್ತ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದೆ. ಘಾಟಿಯ ತೀವ್ರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾಗಿರುವುದರಿಂದ ಬಸ್ ಪ್ರಪಾತಕ್ಕೆ ಉರುಳುವ ಭೀಕರ ಅಪಾಯವಿದ್ದರೂ, ಅದೃಷ್ಟವಶಾತ್ ರಸ್ತೆಯಲ್ಲೇ ಪಲ್ಟಿಯಾದ ಕಾರಣ ದೊಡ್ಡ ದುರಂತ ತಪ್ಪಿದಂತಾಗಿದೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 25 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪಲ್ಟಿಯಾದ ಬಸ್ಸನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಗಿದೆ.
ಪ್ರಾಥಮಿಕವಾಗಿ, ಘಾಟಿಯ ಕಡಿದಾದ ತಿರುವುಗಳಲ್ಲಿ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm