ಬ್ರೇಕಿಂಗ್ ನ್ಯೂಸ್
27-04-26 05:42 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 27: ಮಂಗಳೂರಿನಲ್ಲಿ ನಡೆದ ಭೀಕರ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆ ವೇಳೆ ಶಾರೀಕ್ ತನ್ನ ಮೇಲಿನ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಶೀಘ್ರ ವಿಚಾರಣೆ ಮುಗಿದು ನ್ಯಾಯಾಧೀಶರು ತೀರ್ಪು ನೀಡಿದ್ದು 10 ವರ್ಷಗಳ ಶಿಕ್ಷೆ ಮತ್ತು 94 ಸಾವಿರ ರೂ. ದಂಡ ವಿಧಿಸಿದೆ. 2022ರ ನವೆಂಬರ್ 19ರಂದು ಮೊಹಮ್ಮದ್ ಶಾರೀಕ್ ಮೈಸೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬಂದು ನಾಗುರಿಯಲ್ಲಿ ಕುಕ್ಕರ್ ಬಾಂಬ್ ಸೆಟ್ ಮಾಡಿ ಆಟೋದಲ್ಲಿ ತೆರಳುತ್ತಿದ್ದಾಗ ಬ್ಲಾಸ್ಟ್ ಆಗಿತ್ತು. ವಿಚಾರಣೆ ಸಂದರ್ಭದಲ್ಲಿ ಈ ಬಾಂಬನ್ನು ಕದ್ರಿ ಮಂಜುನಾಥ ದೇವಸ್ಥಾನ ಆವರಣದಲ್ಲಿ ಇಡುವ ಉದ್ದೇಶ ಹೊಂದಿದ್ಧ ಎಂಬ ವಿಚಾರ ತಿಳಿದುಬಂದಿತ್ತು. ಘಟನೆಯಲ್ಲಿ ಕುಕ್ಕರ್ ಹಿಡಿದುಕೊಂಡಿದ್ದ ಶಾರೀಕ್ ಮತ್ತು ಆಟೋ ಚಾಲಕ ಪುರುಷೋತ್ತಮ ಪೂಜಾರಿ ತೀವ್ರ ಗಾಯಗೊಂಡಿದ್ದರು.

ಇಂದು ಕೋರ್ಟಿನಲ್ಲಿ ತೀರ್ಪು ಘೋಷಣೆ ಬಳಿಕ ಶಾರೀಕ್ ತನ್ನನ್ನು ಶಿವಮೊಗ್ಗ ಜೈಲಿಗೆ ಟ್ರ್ಯಾನ್ಸ್ ಫರ್ ಮಾಡುವಂತೆ ಕೇಳಿಕೊಂಡಿದ್ದಾನೆ. ಸರಿಯಾಗಿ ನಿದ್ದೆ ಬಾರದೇ 3 ವರ್ಷ ಆಗಿದೆ, ಟ್ಯಾಬ್ಲೆಟ್ ಎಲ್ಲಾ ಸರಿ ಹೋಗುತ್ತಿಲ್ಲ. ಹಾಗಾಗಿ ಶಿವಮೊಗ್ಗಕ್ಕೆ ಸ್ಥಳಾಂತರ ಮಾಡಲು ಮನವಿ ಮಾಡಿದ್ದಾನೆ. ಎಲ್ಲಾ ಖೈದಿಗಳು ಬೆಂಗಳೂರಿಗೆ ವರ್ಗಾವಣೆ ಆಗ್ಬೇಕು ಅಂತ ಅರ್ಜಿ ಹಾಕ್ತಾರೆ, ನೀವೇನು ಶಿವಮೊಗ್ಗ ಕೇಳ್ತಿದಿರಾ ಅಂತ ಜಡ್ಜ್ ಪ್ರಶ್ನೆ ಮಾಡಿದ್ದಾರೆ.
ವಿಚಾರಣೆ ಹಂತದಲ್ಲಿ ಆರೋಪಿ ಶಾರಿಕ್ ತಾನು ಮಾಡಿದ ಕೃತ್ಯದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ನಲ್ಲಿ ಈ ಪ್ರಕ್ರಿಯೆ ನಡೆದಿದ್ದು, ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ವಿಚಾರಣೆ ವೇಗವಾಗಿ ಮುಕ್ತಾಯಗೊಂಡು ಶಿಕ್ಷೆ ಪ್ರಕಟವಾಗಿದೆ. ಆರೋಪಿಯ ಕೌಟುಂಬಿಕ ಹಿನ್ನೆಲೆ ಮತ್ತು ಆತ ತಪ್ಪೊಪ್ಪಿಕೊಂಡಿರುವ ಅಂಶವನ್ನು ಗಮನದಲ್ಲಿಟ್ಟು ನ್ಯಾಯಾಲಯವು, 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm