ಬ್ರೇಕಿಂಗ್ ನ್ಯೂಸ್
27-04-26 05:42 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 27: ಮಂಗಳೂರಿನಲ್ಲಿ ನಡೆದ ಭೀಕರ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆ ವೇಳೆ ಶಾರೀಕ್ ತನ್ನ ಮೇಲಿನ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಶೀಘ್ರ ವಿಚಾರಣೆ ಮುಗಿದು ನ್ಯಾಯಾಧೀಶರು ತೀರ್ಪು ನೀಡಿದ್ದು 10 ವರ್ಷಗಳ ಶಿಕ್ಷೆ ಮತ್ತು 94 ಸಾವಿರ ರೂ. ದಂಡ ವಿಧಿಸಿದೆ. 2022ರ ನವೆಂಬರ್ 19ರಂದು ಮೊಹಮ್ಮದ್ ಶಾರೀಕ್ ಮೈಸೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬಂದು ನಾಗುರಿಯಲ್ಲಿ ಕುಕ್ಕರ್ ಬಾಂಬ್ ಸೆಟ್ ಮಾಡಿ ಆಟೋದಲ್ಲಿ ತೆರಳುತ್ತಿದ್ದಾಗ ಬ್ಲಾಸ್ಟ್ ಆಗಿತ್ತು. ವಿಚಾರಣೆ ಸಂದರ್ಭದಲ್ಲಿ ಈ ಬಾಂಬನ್ನು ಕದ್ರಿ ಮಂಜುನಾಥ ದೇವಸ್ಥಾನ ಆವರಣದಲ್ಲಿ ಇಡುವ ಉದ್ದೇಶ ಹೊಂದಿದ್ಧ ಎಂಬ ವಿಚಾರ ತಿಳಿದುಬಂದಿತ್ತು. ಘಟನೆಯಲ್ಲಿ ಕುಕ್ಕರ್ ಹಿಡಿದುಕೊಂಡಿದ್ದ ಶಾರೀಕ್ ಮತ್ತು ಆಟೋ ಚಾಲಕ ಪುರುಷೋತ್ತಮ ಪೂಜಾರಿ ತೀವ್ರ ಗಾಯಗೊಂಡಿದ್ದರು.

ಇಂದು ಕೋರ್ಟಿನಲ್ಲಿ ತೀರ್ಪು ಘೋಷಣೆ ಬಳಿಕ ಶಾರೀಕ್ ತನ್ನನ್ನು ಶಿವಮೊಗ್ಗ ಜೈಲಿಗೆ ಟ್ರ್ಯಾನ್ಸ್ ಫರ್ ಮಾಡುವಂತೆ ಕೇಳಿಕೊಂಡಿದ್ದಾನೆ. ಸರಿಯಾಗಿ ನಿದ್ದೆ ಬಾರದೇ 3 ವರ್ಷ ಆಗಿದೆ, ಟ್ಯಾಬ್ಲೆಟ್ ಎಲ್ಲಾ ಸರಿ ಹೋಗುತ್ತಿಲ್ಲ. ಹಾಗಾಗಿ ಶಿವಮೊಗ್ಗಕ್ಕೆ ಸ್ಥಳಾಂತರ ಮಾಡಲು ಮನವಿ ಮಾಡಿದ್ದಾನೆ. ಎಲ್ಲಾ ಖೈದಿಗಳು ಬೆಂಗಳೂರಿಗೆ ವರ್ಗಾವಣೆ ಆಗ್ಬೇಕು ಅಂತ ಅರ್ಜಿ ಹಾಕ್ತಾರೆ, ನೀವೇನು ಶಿವಮೊಗ್ಗ ಕೇಳ್ತಿದಿರಾ ಅಂತ ಜಡ್ಜ್ ಪ್ರಶ್ನೆ ಮಾಡಿದ್ದಾರೆ.
ವಿಚಾರಣೆ ಹಂತದಲ್ಲಿ ಆರೋಪಿ ಶಾರಿಕ್ ತಾನು ಮಾಡಿದ ಕೃತ್ಯದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ನಲ್ಲಿ ಈ ಪ್ರಕ್ರಿಯೆ ನಡೆದಿದ್ದು, ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ವಿಚಾರಣೆ ವೇಗವಾಗಿ ಮುಕ್ತಾಯಗೊಂಡು ಶಿಕ್ಷೆ ಪ್ರಕಟವಾಗಿದೆ. ಆರೋಪಿಯ ಕೌಟುಂಬಿಕ ಹಿನ್ನೆಲೆ ಮತ್ತು ಆತ ತಪ್ಪೊಪ್ಪಿಕೊಂಡಿರುವ ಅಂಶವನ್ನು ಗಮನದಲ್ಲಿಟ್ಟು ನ್ಯಾಯಾಲಯವು, 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 05:42 pm
HK News Staffer
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm