ಬ್ರೇಕಿಂಗ್ ನ್ಯೂಸ್
27-04-26 10:04 pm HK News Staffer ಕ್ರೈಂ
ಕೋಲ್ಕತ್ತಾ, ಏಪ್ರಿಲ್ 27: ರೈಲು ಪ್ರಯಾಣದ ವೇಳೆ ಹೃದಯ ಕಲುಕುವ ಘಟನೆ ನಡೆದಿದ್ದು, ಕೈಜಾರಿ ಮಗು ರೈಲಿನಿಂದ ಕೆಳಕ್ಕೆ ಬಿದ್ದರೂ ಚೈನ್ ಎಳೆದರೂ ರೈಲು ನಿಲ್ಲದೇ ಮುಂದುವರಿದ ಘಟನೆ ಆತಂಕ ಮೂಡಿಸಿದೆ. ಜಲ್ಪೈಗುರಿ ಮತ್ತು ರಾಮನಗರ ನಡುವಿನ ಪ್ರಯಾಣದ ವೇಳೆ ಈ ದುರ್ಘಟನೆ ನಡೆದಿದೆ.
ಮಗು ಕೆಳಗೆ ಬಿದ್ದ ತಕ್ಷಣ ತಾಯಿ ಆತಂಕದಿಂದ ತುರ್ತು ಸರಪಳಿಯನ್ನು ಎಳೆದರೂ ರೈಲು ನಿಲ್ಲಲಿಲ್ಲ. ತಾಯಿಯ ಆಕ್ರಂದನ ಕಂಡು ಬೋಗಿಯಲ್ಲಿದ್ದ ಇತರ ಪ್ರಯಾಣಿಕರೂ ಸಹಕರಿಸಿ ಪದೇ ಪದೇ ಸರಪಳಿಯನ್ನು ಎಳೆದರೂ, ರೈಲಿನ ಬ್ರೇಕ್ ವ್ಯವಸ್ಥೆ ಸ್ಪಂದಿಸದೇ ಮುಂದುವರಿದಿದ್ದು, ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
ಈ ಸಂದರ್ಭದಲ್ಲಿ ಬೋಗಿಯಲ್ಲಿದ್ದ ಯುವಕನೊಬ್ಬ ತಕ್ಷಣವೇ ಆರ್ಪಿಎಫ್ ಹಾಗೂ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಆತ ಘಟನೆಯ ವಿಡಿಯೋ ಸೆರೆಹಿಡಿದು, “ನಾವು ಎಲ್ಲರಿಗೂ ಕರೆ ಮಾಡುತ್ತಿದ್ದೇವೆ, ಸರಪಳಿ ಎಳೆಯುತ್ತಿದ್ದೇವೆ, ಆದರೂ ರೈಲು ನಿಲ್ಲುತ್ತಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾನೆ.
ರೈಲು ಮುಂದಿನ ನಿಲ್ದಾಣ ತಲುಪುವವರೆಗೆ ತಾಯಿ ಮಗುವಿನ ಬಳಿ ತಲುಪಲು ಸಾಧ್ಯವಾಗದೆ ರೈಲಿನಲ್ಲೇ ಕಣ್ಣೀರಿಡುತ್ತಾ ಕುಳಿತಿದ್ದಾಳೆ. ಬಳಿಕ ಪೊಲೀಸರು ಹಾಗೂ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಗುವಿನ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆ ರೈಲ್ವೆ ಸುರಕ್ಷತಾ ವ್ಯವಸ್ಥೆ ಮತ್ತು ನಿರ್ವಹಣೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ತುರ್ತು ಸರಪಳಿ ವ್ಯವಸ್ಥೆಯ ಕಾರ್ಯಕ್ಷಮತೆ ಕುರಿತು ಪ್ರಶ್ನೆಗಳು ಉದ್ಭವಿಸಿವೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm