ಬ್ರೇಕಿಂಗ್ ನ್ಯೂಸ್
27-04-26 10:04 pm HK News Staffer ಕ್ರೈಂ
ಕೋಲ್ಕತ್ತಾ, ಏಪ್ರಿಲ್ 27: ರೈಲು ಪ್ರಯಾಣದ ವೇಳೆ ಹೃದಯ ಕಲುಕುವ ಘಟನೆ ನಡೆದಿದ್ದು, ಕೈಜಾರಿ ಮಗು ರೈಲಿನಿಂದ ಕೆಳಕ್ಕೆ ಬಿದ್ದರೂ ಚೈನ್ ಎಳೆದರೂ ರೈಲು ನಿಲ್ಲದೇ ಮುಂದುವರಿದ ಘಟನೆ ಆತಂಕ ಮೂಡಿಸಿದೆ. ಜಲ್ಪೈಗುರಿ ಮತ್ತು ರಾಮನಗರ ನಡುವಿನ ಪ್ರಯಾಣದ ವೇಳೆ ಈ ದುರ್ಘಟನೆ ನಡೆದಿದೆ.
ಮಗು ಕೆಳಗೆ ಬಿದ್ದ ತಕ್ಷಣ ತಾಯಿ ಆತಂಕದಿಂದ ತುರ್ತು ಸರಪಳಿಯನ್ನು ಎಳೆದರೂ ರೈಲು ನಿಲ್ಲಲಿಲ್ಲ. ತಾಯಿಯ ಆಕ್ರಂದನ ಕಂಡು ಬೋಗಿಯಲ್ಲಿದ್ದ ಇತರ ಪ್ರಯಾಣಿಕರೂ ಸಹಕರಿಸಿ ಪದೇ ಪದೇ ಸರಪಳಿಯನ್ನು ಎಳೆದರೂ, ರೈಲಿನ ಬ್ರೇಕ್ ವ್ಯವಸ್ಥೆ ಸ್ಪಂದಿಸದೇ ಮುಂದುವರಿದಿದ್ದು, ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
ಈ ಸಂದರ್ಭದಲ್ಲಿ ಬೋಗಿಯಲ್ಲಿದ್ದ ಯುವಕನೊಬ್ಬ ತಕ್ಷಣವೇ ಆರ್ಪಿಎಫ್ ಹಾಗೂ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಆತ ಘಟನೆಯ ವಿಡಿಯೋ ಸೆರೆಹಿಡಿದು, “ನಾವು ಎಲ್ಲರಿಗೂ ಕರೆ ಮಾಡುತ್ತಿದ್ದೇವೆ, ಸರಪಳಿ ಎಳೆಯುತ್ತಿದ್ದೇವೆ, ಆದರೂ ರೈಲು ನಿಲ್ಲುತ್ತಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾನೆ.
ರೈಲು ಮುಂದಿನ ನಿಲ್ದಾಣ ತಲುಪುವವರೆಗೆ ತಾಯಿ ಮಗುವಿನ ಬಳಿ ತಲುಪಲು ಸಾಧ್ಯವಾಗದೆ ರೈಲಿನಲ್ಲೇ ಕಣ್ಣೀರಿಡುತ್ತಾ ಕುಳಿತಿದ್ದಾಳೆ. ಬಳಿಕ ಪೊಲೀಸರು ಹಾಗೂ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಗುವಿನ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆ ರೈಲ್ವೆ ಸುರಕ್ಷತಾ ವ್ಯವಸ್ಥೆ ಮತ್ತು ನಿರ್ವಹಣೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ತುರ್ತು ಸರಪಳಿ ವ್ಯವಸ್ಥೆಯ ಕಾರ್ಯಕ್ಷಮತೆ ಕುರಿತು ಪ್ರಶ್ನೆಗಳು ಉದ್ಭವಿಸಿವೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm