ಬ್ರೇಕಿಂಗ್ ನ್ಯೂಸ್
30-04-26 10:14 am HK News Staffer ಕ್ರೈಂ
ಬೆಂಗಳೂರು, ಏ 29: ಅಮ್ಮನ ಜೊತೆ ಬಟ್ಟೆ ಖರೀದಿಸಲು ಶಿವಾಜಿನಗರಕ್ಕೆ ಬಂದಿದ್ದ ಬಾಲಕ ದ್ವಿಚಕ್ರ ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು, ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಮಗನ ಸಾವು ಕಣ್ಣಾರೆ ಕಂಡ ತಾಯಿ ಕುಸಿದು ಬಿದ್ದು ಆಸ್ಪತ್ರೆ ಪಾಲಾಗಿದ್ದಾರೆ.
ಸಯ್ಯದ್ ಸುಫಿಯಾನ್ (17) ಪ್ರಾಣ ಕಳೆದುಕೊಂಡ ಮಗ. ತಾಯಿ ಉಮೇ ಸಲ್ಮಾ ಆರೋಗ್ಯದಲ್ಲಿ ಏರುಪೇರಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಮ ವರ್ಗದ ಸಯ್ಯದ್ ಕಾಡುಗೊಂಡನಹಳ್ಳಿ ವೆಂಕಟಾಪುರದಲ್ಲಿ ನೆಲೆಸಿದ್ದ. ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ದ್ವಿತೀಯ ಪಿಯುಸಿ ವ್ಯಾಸಂಗಕ್ಕಾಗಿ ಸನ್ನದ್ಧನಾಗಿದ್ದ. ಕಾಲೇಜಿಗೆ ಹೋಗಲು ಬಟ್ಟೆ ಖರೀದಿಸಲು ಆಕ್ಟಿವಾ ಹೊಂಡಾ ವಾಹನದಲ್ಲಿ ಅಮ್ಮ ಹಾಗೂ ಸೋದರ ಸಂಬಂಧಿ ಜೊತೆ ಶಿವಾಜಿನಗರಕ್ಕೆ ಬಂದಿದ್ದ. ಬಟ್ಟೆ ಖರೀದಿಗಾಗಿ ಜನಜಂಗುಳಿ ಪ್ರದೇಶದಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ಗೆ ಮುಂದಾಗಿದ್ದ. ಇದೇ ವೇಳೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿಯಿತು.
ಕಣ್ಣೆದುರೇ ಮಗನ ಸಾವು ಕಂಡ ತಾಯಿಗೆ ಆಘಾತ: ಈ ವೇಳೆ ವಿದ್ಯುತ್ ಕಂಬಕ್ಕೆ ತಾಗಿಕೊಂಡಿದ್ದ ವೈರ್ ನೇರವಾಗಿ ಸೈಯದ್ಗೆ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕ್ಷರ್ಣಾಧದಲ್ಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳೀಯರ ನೆರವಿನಿಂದ ಬಾಲಕನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಹೇಳುತ್ತಿದ್ದಂತೆ ತಾಯಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಂಬಂಧಿಗಳು ತಿಳಿಸಿದ್ದಾರೆ.
ಸಯ್ಯದ್ ತಂದೆ ಶಫಿವುಲ್ಲಾ ಅವರು ಆಟೋ ಮೊಬೈಲ್ ಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಉಮೇ ಸಲ್ಮಾ ಗೃಹಿಣಿಯಾಗಿದ್ದಾರೆ. ಅವರಿಗೆ ಆರು ವರ್ಷದ ಪುತ್ರಿಯೂ ಇದ್ದಾಳೆ. ಪೋಷಕರಿಗೆ ಸಯ್ಯದ್ನನ್ನು ಚೆನ್ನಾಗಿ ಓದಿಸಿ ಇಂಜಿನಿಯರಿಂಗ್ ಓದಿಸುವ ಆಸೆ ಇತ್ತು. ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿಯುವ ಕೆಲ ಕ್ಷಣಗಳ ಹಿಂದೆ ಈ ದುರಂತ ಸಂಭವಿಸಿದೆ. ಸುಮಾರು 50 ಮೀಟರ್ ಅಂತರದಲ್ಲಿ ಈ ಘಟನೆ ನಡೆದಿದೆ ಎಂದು ಸಂಬಂಧಿ ಅಯಾನ್ ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm