ಬ್ರೇಕಿಂಗ್ ನ್ಯೂಸ್
30-04-26 10:14 am HK News Staffer ಕ್ರೈಂ
ಬೆಂಗಳೂರು, ಏ 29: ಅಮ್ಮನ ಜೊತೆ ಬಟ್ಟೆ ಖರೀದಿಸಲು ಶಿವಾಜಿನಗರಕ್ಕೆ ಬಂದಿದ್ದ ಬಾಲಕ ದ್ವಿಚಕ್ರ ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು, ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಮಗನ ಸಾವು ಕಣ್ಣಾರೆ ಕಂಡ ತಾಯಿ ಕುಸಿದು ಬಿದ್ದು ಆಸ್ಪತ್ರೆ ಪಾಲಾಗಿದ್ದಾರೆ.
ಸಯ್ಯದ್ ಸುಫಿಯಾನ್ (17) ಪ್ರಾಣ ಕಳೆದುಕೊಂಡ ಮಗ. ತಾಯಿ ಉಮೇ ಸಲ್ಮಾ ಆರೋಗ್ಯದಲ್ಲಿ ಏರುಪೇರಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಮ ವರ್ಗದ ಸಯ್ಯದ್ ಕಾಡುಗೊಂಡನಹಳ್ಳಿ ವೆಂಕಟಾಪುರದಲ್ಲಿ ನೆಲೆಸಿದ್ದ. ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ದ್ವಿತೀಯ ಪಿಯುಸಿ ವ್ಯಾಸಂಗಕ್ಕಾಗಿ ಸನ್ನದ್ಧನಾಗಿದ್ದ. ಕಾಲೇಜಿಗೆ ಹೋಗಲು ಬಟ್ಟೆ ಖರೀದಿಸಲು ಆಕ್ಟಿವಾ ಹೊಂಡಾ ವಾಹನದಲ್ಲಿ ಅಮ್ಮ ಹಾಗೂ ಸೋದರ ಸಂಬಂಧಿ ಜೊತೆ ಶಿವಾಜಿನಗರಕ್ಕೆ ಬಂದಿದ್ದ. ಬಟ್ಟೆ ಖರೀದಿಗಾಗಿ ಜನಜಂಗುಳಿ ಪ್ರದೇಶದಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ಗೆ ಮುಂದಾಗಿದ್ದ. ಇದೇ ವೇಳೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿಯಿತು.
ಕಣ್ಣೆದುರೇ ಮಗನ ಸಾವು ಕಂಡ ತಾಯಿಗೆ ಆಘಾತ: ಈ ವೇಳೆ ವಿದ್ಯುತ್ ಕಂಬಕ್ಕೆ ತಾಗಿಕೊಂಡಿದ್ದ ವೈರ್ ನೇರವಾಗಿ ಸೈಯದ್ಗೆ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕ್ಷರ್ಣಾಧದಲ್ಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳೀಯರ ನೆರವಿನಿಂದ ಬಾಲಕನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಹೇಳುತ್ತಿದ್ದಂತೆ ತಾಯಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಂಬಂಧಿಗಳು ತಿಳಿಸಿದ್ದಾರೆ.
ಸಯ್ಯದ್ ತಂದೆ ಶಫಿವುಲ್ಲಾ ಅವರು ಆಟೋ ಮೊಬೈಲ್ ಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಉಮೇ ಸಲ್ಮಾ ಗೃಹಿಣಿಯಾಗಿದ್ದಾರೆ. ಅವರಿಗೆ ಆರು ವರ್ಷದ ಪುತ್ರಿಯೂ ಇದ್ದಾಳೆ. ಪೋಷಕರಿಗೆ ಸಯ್ಯದ್ನನ್ನು ಚೆನ್ನಾಗಿ ಓದಿಸಿ ಇಂಜಿನಿಯರಿಂಗ್ ಓದಿಸುವ ಆಸೆ ಇತ್ತು. ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿಯುವ ಕೆಲ ಕ್ಷಣಗಳ ಹಿಂದೆ ಈ ದುರಂತ ಸಂಭವಿಸಿದೆ. ಸುಮಾರು 50 ಮೀಟರ್ ಅಂತರದಲ್ಲಿ ಈ ಘಟನೆ ನಡೆದಿದೆ ಎಂದು ಸಂಬಂಧಿ ಅಯಾನ್ ತಿಳಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm