ಬ್ರೇಕಿಂಗ್ ನ್ಯೂಸ್
30-04-26 10:14 am HK News Staffer ಕ್ರೈಂ
ಬೆಂಗಳೂರು, ಏ 29: ಅಮ್ಮನ ಜೊತೆ ಬಟ್ಟೆ ಖರೀದಿಸಲು ಶಿವಾಜಿನಗರಕ್ಕೆ ಬಂದಿದ್ದ ಬಾಲಕ ದ್ವಿಚಕ್ರ ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು, ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಮಗನ ಸಾವು ಕಣ್ಣಾರೆ ಕಂಡ ತಾಯಿ ಕುಸಿದು ಬಿದ್ದು ಆಸ್ಪತ್ರೆ ಪಾಲಾಗಿದ್ದಾರೆ.
ಸಯ್ಯದ್ ಸುಫಿಯಾನ್ (17) ಪ್ರಾಣ ಕಳೆದುಕೊಂಡ ಮಗ. ತಾಯಿ ಉಮೇ ಸಲ್ಮಾ ಆರೋಗ್ಯದಲ್ಲಿ ಏರುಪೇರಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಮ ವರ್ಗದ ಸಯ್ಯದ್ ಕಾಡುಗೊಂಡನಹಳ್ಳಿ ವೆಂಕಟಾಪುರದಲ್ಲಿ ನೆಲೆಸಿದ್ದ. ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ದ್ವಿತೀಯ ಪಿಯುಸಿ ವ್ಯಾಸಂಗಕ್ಕಾಗಿ ಸನ್ನದ್ಧನಾಗಿದ್ದ. ಕಾಲೇಜಿಗೆ ಹೋಗಲು ಬಟ್ಟೆ ಖರೀದಿಸಲು ಆಕ್ಟಿವಾ ಹೊಂಡಾ ವಾಹನದಲ್ಲಿ ಅಮ್ಮ ಹಾಗೂ ಸೋದರ ಸಂಬಂಧಿ ಜೊತೆ ಶಿವಾಜಿನಗರಕ್ಕೆ ಬಂದಿದ್ದ. ಬಟ್ಟೆ ಖರೀದಿಗಾಗಿ ಜನಜಂಗುಳಿ ಪ್ರದೇಶದಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ಗೆ ಮುಂದಾಗಿದ್ದ. ಇದೇ ವೇಳೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿಯಿತು.
ಕಣ್ಣೆದುರೇ ಮಗನ ಸಾವು ಕಂಡ ತಾಯಿಗೆ ಆಘಾತ: ಈ ವೇಳೆ ವಿದ್ಯುತ್ ಕಂಬಕ್ಕೆ ತಾಗಿಕೊಂಡಿದ್ದ ವೈರ್ ನೇರವಾಗಿ ಸೈಯದ್ಗೆ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕ್ಷರ್ಣಾಧದಲ್ಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳೀಯರ ನೆರವಿನಿಂದ ಬಾಲಕನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಹೇಳುತ್ತಿದ್ದಂತೆ ತಾಯಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಂಬಂಧಿಗಳು ತಿಳಿಸಿದ್ದಾರೆ.
ಸಯ್ಯದ್ ತಂದೆ ಶಫಿವುಲ್ಲಾ ಅವರು ಆಟೋ ಮೊಬೈಲ್ ಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಉಮೇ ಸಲ್ಮಾ ಗೃಹಿಣಿಯಾಗಿದ್ದಾರೆ. ಅವರಿಗೆ ಆರು ವರ್ಷದ ಪುತ್ರಿಯೂ ಇದ್ದಾಳೆ. ಪೋಷಕರಿಗೆ ಸಯ್ಯದ್ನನ್ನು ಚೆನ್ನಾಗಿ ಓದಿಸಿ ಇಂಜಿನಿಯರಿಂಗ್ ಓದಿಸುವ ಆಸೆ ಇತ್ತು. ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿಯುವ ಕೆಲ ಕ್ಷಣಗಳ ಹಿಂದೆ ಈ ದುರಂತ ಸಂಭವಿಸಿದೆ. ಸುಮಾರು 50 ಮೀಟರ್ ಅಂತರದಲ್ಲಿ ಈ ಘಟನೆ ನಡೆದಿದೆ ಎಂದು ಸಂಬಂಧಿ ಅಯಾನ್ ತಿಳಿಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm