ಬ್ರೇಕಿಂಗ್ ನ್ಯೂಸ್
30-04-26 10:45 am HK News Staffer ಕ್ರೈಂ
ಕೋಲಾರ, ಏಪ್ರಿಲ್ 30: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಸಂಚಲನ ಮೂಡಿಸಿರುವ ನಕಲಿ ಪಿಎಚ್ಡಿ ಹಗರಣ ಇದೀಗ ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದಿದೆ. ಕೋಲಾರ ಸೇರಿದಂತೆ ವಿವಿಧ ಭಾಗಗಳ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದ 400ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹಠಾತ್ ರಾಜೀನಾಮೆ ನೀಡಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಸರ್ಕಾರದಿಂದ ದಾಖಲೆ ಪರಿಶೀಲನೆಗಾಗಿ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯವಿಧಾನ (SOP) ಜಾರಿಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಅನೇಕರು ನಕಲಿ ಪಿಎಚ್ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದರೆಂಬುದು ಹೊರಬಿದ್ದಿದೆ. ಕಾಲೇಜು ಶಿಕ್ಷಣ ಇಲಾಖೆಯ ಮಾಹಿತಿಯ ಪ್ರಕಾರ, ಈಗಾಗಲೇ 25ಕ್ಕೂ ಹೆಚ್ಚು ಉಪನ್ಯಾಸಕರು ಸಲ್ಲಿಸಿದ ಪಿಎಚ್ಡಿ ಪ್ರಮಾಣಪತ್ರಗಳು ನಕಲಿ ಎಂಬುದು ದೃಢಪಟ್ಟಿದೆ. ಇನ್ನೂ 350ಕ್ಕೂ ಹೆಚ್ಚು ಮಂದಿ ಅನಾರೋಗ್ಯ, ವೈಯಕ್ತಿಕ ಕಾರಣ ಅಥವಾ ಬೇರೆ ಉದ್ಯೋಗ ಸಿಕ್ಕಿದೆ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. 30ಕ್ಕೂ ಹೆಚ್ಚು ಉಪನ್ಯಾಸಕರು ದೀರ್ಘಕಾಲದಿಂದ ಗೈರುಹಾಜರಾಗಿರುವುದೂ ಗಮನಾರ್ಹವಾಗಿದೆ.
ಉದ್ಯೋಗ ಉಳಿಸಿಕೊಳ್ಳುವ ಒತ್ತಡದಲ್ಲಿ ಹಲವರು ಲಕ್ಷಾಂತರ ರೂಪಾಯಿ ಸಾಲ ಮಾಡಿ ನಕಲಿ ಪಿಎಚ್ಡಿ ಖರೀದಿಸಿರುವುದಾಗಿ ತಿಳಿದುಬಂದಿದೆ. ಮಧ್ಯವರ್ತಿಗಳು “ಹೊರ ರಾಜ್ಯದ ಮಾನ್ಯತೆ ಹೊಂದಿದ ಪಿಎಚ್ಡಿ” ಕೊಡಿಸುವುದಾಗಿ ನಂಬಿಸಿ ಒಬ್ಬರಿಂದ ₹5 ರಿಂದ ₹7 ಲಕ್ಷದವರೆಗೆ ಹಣ ಪಡೆದು, ಕೇವಲ 15 ದಿನಗಳಲ್ಲಿ ಪ್ರಮಾಣಪತ್ರ, ಕೋರ್ಸ್ ವರ್ಕ್ ಹಾಗೂ ಪ್ರಬಂಧಗಳನ್ನೂ ಸಿದ್ಧಪಡಿಸಿ ನೀಡುತ್ತಿದ್ದರೆಂಬ ಮಾಹಿತಿ ಬಹಿರಂಗವಾಗಿದೆ.
ಈ ದಾಖಲೆಗಳನ್ನು ಆಧಾರ ಮಾಡಿಕೊಂಡು ಹಲವರು ಉಪನ್ಯಾಸಕರಾಗಿ ನೇಮಕಗೊಂಡಿದ್ದು, ಈಗ ಎಸ್ಒಪಿ ಜಾರಿಯಾದ ನಂತರ ಸಿಕ್ಕಿಬೀಳುವ ಭಯದಿಂದ ಸ್ವಯಂ ರಾಜೀನಾಮೆ ನೀಡುತ್ತಿದ್ದಾರೆ. ಇದರಿಂದ ಹಣ ಕಳೆದುಕೊಂಡವರೂ ಉದ್ಯೋಗ ಕಳೆದುಕೊಂಡವರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಯುಜಿಸಿ ನಿಯಮಗಳ ಪ್ರಕಾರ ಬೋಧಕರಿಗೆ ಸ್ನಾತಕೋತ್ತರ ಪದವಿಯ ಜೊತೆಗೆ ಎನ್ಇಟಿ ಅಥವಾ ಕೆ-ಸೆಟ್ ಅರ್ಹತೆ ಹಾಗೂ ಪಿಎಚ್ಡಿ ಅಗತ್ಯ. ಈ ನಿಯಮಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ಪ್ರಮಾಣಪತ್ರಗಳ ಮೂಲಕ ಉದ್ಯೋಗ ಪಡೆದವರ ವಿರುದ್ಧ ಈಗ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿ ಟಿ.ಆರ್. ಶೋಭಾ ತಿಳಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm