ಬ್ರೇಕಿಂಗ್ ನ್ಯೂಸ್
30-04-26 10:45 am HK News Staffer ಕ್ರೈಂ
ಕೋಲಾರ, ಏಪ್ರಿಲ್ 30: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಸಂಚಲನ ಮೂಡಿಸಿರುವ ನಕಲಿ ಪಿಎಚ್ಡಿ ಹಗರಣ ಇದೀಗ ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದಿದೆ. ಕೋಲಾರ ಸೇರಿದಂತೆ ವಿವಿಧ ಭಾಗಗಳ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದ 400ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹಠಾತ್ ರಾಜೀನಾಮೆ ನೀಡಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಸರ್ಕಾರದಿಂದ ದಾಖಲೆ ಪರಿಶೀಲನೆಗಾಗಿ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯವಿಧಾನ (SOP) ಜಾರಿಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಅನೇಕರು ನಕಲಿ ಪಿಎಚ್ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದರೆಂಬುದು ಹೊರಬಿದ್ದಿದೆ. ಕಾಲೇಜು ಶಿಕ್ಷಣ ಇಲಾಖೆಯ ಮಾಹಿತಿಯ ಪ್ರಕಾರ, ಈಗಾಗಲೇ 25ಕ್ಕೂ ಹೆಚ್ಚು ಉಪನ್ಯಾಸಕರು ಸಲ್ಲಿಸಿದ ಪಿಎಚ್ಡಿ ಪ್ರಮಾಣಪತ್ರಗಳು ನಕಲಿ ಎಂಬುದು ದೃಢಪಟ್ಟಿದೆ. ಇನ್ನೂ 350ಕ್ಕೂ ಹೆಚ್ಚು ಮಂದಿ ಅನಾರೋಗ್ಯ, ವೈಯಕ್ತಿಕ ಕಾರಣ ಅಥವಾ ಬೇರೆ ಉದ್ಯೋಗ ಸಿಕ್ಕಿದೆ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. 30ಕ್ಕೂ ಹೆಚ್ಚು ಉಪನ್ಯಾಸಕರು ದೀರ್ಘಕಾಲದಿಂದ ಗೈರುಹಾಜರಾಗಿರುವುದೂ ಗಮನಾರ್ಹವಾಗಿದೆ.
ಉದ್ಯೋಗ ಉಳಿಸಿಕೊಳ್ಳುವ ಒತ್ತಡದಲ್ಲಿ ಹಲವರು ಲಕ್ಷಾಂತರ ರೂಪಾಯಿ ಸಾಲ ಮಾಡಿ ನಕಲಿ ಪಿಎಚ್ಡಿ ಖರೀದಿಸಿರುವುದಾಗಿ ತಿಳಿದುಬಂದಿದೆ. ಮಧ್ಯವರ್ತಿಗಳು “ಹೊರ ರಾಜ್ಯದ ಮಾನ್ಯತೆ ಹೊಂದಿದ ಪಿಎಚ್ಡಿ” ಕೊಡಿಸುವುದಾಗಿ ನಂಬಿಸಿ ಒಬ್ಬರಿಂದ ₹5 ರಿಂದ ₹7 ಲಕ್ಷದವರೆಗೆ ಹಣ ಪಡೆದು, ಕೇವಲ 15 ದಿನಗಳಲ್ಲಿ ಪ್ರಮಾಣಪತ್ರ, ಕೋರ್ಸ್ ವರ್ಕ್ ಹಾಗೂ ಪ್ರಬಂಧಗಳನ್ನೂ ಸಿದ್ಧಪಡಿಸಿ ನೀಡುತ್ತಿದ್ದರೆಂಬ ಮಾಹಿತಿ ಬಹಿರಂಗವಾಗಿದೆ.
ಈ ದಾಖಲೆಗಳನ್ನು ಆಧಾರ ಮಾಡಿಕೊಂಡು ಹಲವರು ಉಪನ್ಯಾಸಕರಾಗಿ ನೇಮಕಗೊಂಡಿದ್ದು, ಈಗ ಎಸ್ಒಪಿ ಜಾರಿಯಾದ ನಂತರ ಸಿಕ್ಕಿಬೀಳುವ ಭಯದಿಂದ ಸ್ವಯಂ ರಾಜೀನಾಮೆ ನೀಡುತ್ತಿದ್ದಾರೆ. ಇದರಿಂದ ಹಣ ಕಳೆದುಕೊಂಡವರೂ ಉದ್ಯೋಗ ಕಳೆದುಕೊಂಡವರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಯುಜಿಸಿ ನಿಯಮಗಳ ಪ್ರಕಾರ ಬೋಧಕರಿಗೆ ಸ್ನಾತಕೋತ್ತರ ಪದವಿಯ ಜೊತೆಗೆ ಎನ್ಇಟಿ ಅಥವಾ ಕೆ-ಸೆಟ್ ಅರ್ಹತೆ ಹಾಗೂ ಪಿಎಚ್ಡಿ ಅಗತ್ಯ. ಈ ನಿಯಮಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ಪ್ರಮಾಣಪತ್ರಗಳ ಮೂಲಕ ಉದ್ಯೋಗ ಪಡೆದವರ ವಿರುದ್ಧ ಈಗ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿ ಟಿ.ಆರ್. ಶೋಭಾ ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm