ಬ್ರೇಕಿಂಗ್ ನ್ಯೂಸ್
01-05-26 01:45 pm HK News Staffer ಕ್ರೈಂ
ಬೆಂಗಳೂರು, ಮೇ 1: ಮಹಿಳೆಯರನ್ನು ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯ ಚಂದ್ರೇಗೌಡನನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದಂತೆ ಹಲವು ಆಘಾತಕಾರಿ ಅಂಶಗಳು ಬಹಿರಂಗವಾಗಿವೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ನಕಲಿ ಪರಿಚಯ ನೀಡಿ ನಂಬಿಸುತ್ತಿದ್ದ. ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂಬಂತೆ ನಕಲಿ ಗುರುತಿನ ಚೀಟಿಗಳನ್ನು ಬಳಸಿ ಭೀತಿ ಹುಟ್ಟಿಸಿ, ನಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ, ಅದನ್ನೇ ಬ್ಲ್ಯಾಕ್ಮೇಲ್ಗೆ ಬಳಸುತ್ತಿದ್ದನೆಂಬ ಆರೋಪ ಕೇಳಿಬಂದಿದೆ.
ಆರೋಪಿಯ ಮೊಬೈಲ್ ಪರಿಶೀಲನೆಯ ವೇಳೆ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿದ್ದು, ಪ್ರಕರಣದ ಗಂಭೀರತೆ ಹೆಚ್ಚಿಸಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ, ಆಕೆಯೊಂದಿಗೆ ಸಂಬಂಧ ಬೆಳೆಸಿ ಬಳಿಕ ಹಣ ವಸೂಲಿ ಮಾಡಿದ್ದಾನೆ ಎಂದು ದೂರಲಾಗಿದೆ. ಒಂದೇ ಪ್ರಕರಣದಲ್ಲಿ ಸುಮಾರು 5 ಲಕ್ಷ ರೂಪಾಯಿ ಹಣ ಪಡೆದಿರುವುದಾಗಿ ತಿಳಿದುಬಂದಿದೆ.
ಇನ್ನು ಮದುವೆಯ ನಾಟಕವನ್ನೂ ಆಡಿದ್ದ ಆರೋಪಿ, ಸಂತ್ರಸ್ತೆಗೆ ಅರಿಶಿನದ ಕೊಂಬು ಕಟ್ಟುವ ಮೂಲಕ ವಿವಾಹವಾಗಿದ್ದೇನೆಂದು ನಂಬಿಸಿದ್ದ. ಆಕೆಯ ಆಧಾರ್ ಕಾರ್ಡ್ ಪಡೆದು, ತಾನೇ ಗಂಡನೆಂದು ತೋರಿಸಿ ಮನೆ ಬಾಡಿಗೆ ಒಪ್ಪಂದ ಕೂಡ ಮಾಡಿಸಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆಯ ಮಗಳ ದಾಖಲೆಗಳನ್ನೂ ಬದಲಾಯಿಸಲು ಯತ್ನಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಸಂತ್ರಸ್ತೆ ಆರೋಪಿ ಮೊಬೈಲ್ ಪರಿಶೀಲಿಸಿದಾಗ ಈ ದಂಧೆ ಬಯಲಾಗಿದ್ದು, ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.
ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವಾಗ ಹಾಗೂ ಸಂಬಂಧ ಬೆಳೆಸುವಾಗ ಎಚ್ಚರಿಕೆ ಅಗತ್ಯ. ಯಾವುದೇ ರೀತಿಯ ಬೆದರಿಕೆ ಅಥವಾ ಬ್ಲ್ಯಾಕ್ಮೇಲ್ ಎದುರಾದರೆ ತಕ್ಷಣ ಪೊಲೀಸರಿಗೆ ದೂರು ನೀಡುವುದು ಅತ್ಯಂತ ಮುಖ್ಯ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm