ಬ್ರೇಕಿಂಗ್ ನ್ಯೂಸ್
01-05-26 07:18 pm HK News Staffer ಕ್ರೈಂ
ಉಡುಪಿ, ಮೇ 1: ಕೆಲಸದ ಸ್ಥಳದಲ್ಲಿ ನಡೆದ ಸಣ್ಣ ವಿವಾದವೊಂದು ಗಂಭೀರ ಹಿಂಸಾತ್ಮಕ ಘಟನೆಯಾಗಿ ರೂಪುಗೊಂಡ ಪ್ರಕರಣದಲ್ಲಿ ಕೋರ್ಟ್ ಕಠಿಣ ತೀರ್ಪು ನೀಡಿದೆ. ಕೇರಳ ಮೂಲದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕೇರಳ ಮೂಲದ ರತೀಶ್ ಕೆ.ಟಿ (42) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ. 2022 ಫೆಬ್ರವರಿ 28 ರಂದು ಕೇರಳ ಮೂಲದ ಸುಧೀರ್ ಮತ್ತು ರತೀಶ ಕೆ.ಟಿ. ಅವರು ಚಾರ ಗ್ರಾಮದ ಮ೦ಡಾಡಿಜಡ್ಡುವಿನಲ್ಲಿರುವ ಅಜಿತ್ ಅಗಸ್ಟಿನ್ ಎಂಬುವವರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿರುವ ಸಂಜೀವ್ ಕುಮಾರ್ ಎಂಬಾತನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಸಾಕಷ್ಟು ಮದ್ಯಪಾನ ಮಾಡಿದ್ದು ಇದೇ ವೇಳೆ ಕೆಲಸದ ವಿಚಾರದಲ್ಲಿ ರತೀಶನನ್ನು ಸುಧೀರ್ ನಿಂದಿಸಿದ್ದು, ಬಳಿಕ ಇಬ್ಬರ ಮಧ್ಯೆ ಜಗಳ ನಡೆದಿತ್ತು.
ಆ ಜಗಳವನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆರೋಪಿ, ಎರಡು ದಿನಗಳ ನಂತರ ಅಂದರೆ 2022 ಮಾರ್ಚ್ 2ರಂದು ರಾತ್ರಿ ಸುಮಾರು 1 ಗಂಟೆ ವೇಳೆಗೆ ನಿದ್ದೆಯಲ್ಲಿದ್ದ ಸುಧೀರ್ ಮೇಲೆ ಬಿಸಿ ರಾಸಾಯನಿಕ ಆಸಿಡ್ ಎರಚಿ ಪರಾರಿಯಾಗಿದ್ದನು. ಘಟನೆಯಲ್ಲಿ ಸುಧೀರ್ ಗಂಭೀರವಾಗಿ ಗಾಯಗೊಂಡಿದ್ದನ್ನು.
ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಗಳನ್ನು ಪರಿಶೀಲಿಸಿದ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಸರ್ಕ್ಯೂಟ್ ಬೆಂಚ್, ಕಾರ್ಕಳ) ಆರೋಪಿಯನ್ನು ದೋಷಿಯಾಗಿ ಘೋಷಿಸಿ ಶಿಕ್ಷೆ ವಿಧಿಸಿದೆ. ಪ್ರಸ್ತುತ ರತೀಶ್ ಹಿರಿಯಡ್ಕ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm