ಬ್ರೇಕಿಂಗ್ ನ್ಯೂಸ್
05-05-26 11:23 pm HK News Desk ಕ್ರೈಂ
ಮಂಗಳೂರು, ಮೇ 5: ಫೇಸ್ಬುಕ್, ಇನ್ಸ್ ಟಾ ಗ್ರಾಮ್ ರೀತಿಯ ಜಾಲತಾಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲೇ ನಕಲಿ ಎಐ ವಿಡಿಯೋ ಬಳಸಿ ಜನರನ್ನು ಯಾಮಾರಿಸುವ ಯತ್ನ ರಾಜಾರೋಷ ನಡೆಯುತ್ತಿದೆ. ಈ ಮೋಸದ ಜಾಲಕ್ಕೀಗ ಬುದ್ಧಿವಂತರ ಜಿಲ್ಲೆಯೆಂದು ಹಣೆಪಟ್ಟಿ ಹೊತ್ತಿರುವ ಮಂಗಳೂರಿನ ವ್ಯಕ್ತಿಯೇ ಬಲಿಯಾಗಿದ್ದಾರೆ. ನಕಲಿ ಆನ್ಲೈನ್ ಟ್ರೇಡಿಂಗ್ ಮೋಸದಲ್ಲಿ ಸಿಲುಕಿ 75 ವರ್ಷದ ಹಿರಿಯ ನಾಗರಿಕರೊಬ್ಬರು 18.81 ಲಕ್ಷ ರು. ಕಳಕೊಂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ನಲ್ಲಿ ಸಂತ್ರಸ್ತರು ಫೇಸ್ಬುಕ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಅವರ ರೀತಿಯಲ್ಲೇ ಭಾಷಣವಿರುವ ಆನ್ಲೈನ್ ಟ್ರೇಡಿಂಗ್ ಕುರಿತ ವಿಡಿಯೋವೊಂದನ್ನು ನೋಡಿದ್ದರು. ಇದನ್ನು ನಿಜವೆಂದು ನಂಬಿದ ಅವರು ವಿಡಿಯೋ ಕೆಳಗಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ವಿವರಗಳನ್ನು ನೋಂದಾಯಿಸಿದ್ದರು. ಇದಾದ ಬೆನ್ನಲ್ಲೇ ‘ಮೀನಾಕ್ಷಿ’ ಎಂಬ ಹೆಸರಿನ ವ್ಯಕ್ತಿಯಿಂದ ಕರೆ ಬಂದಿದ್ದು, ಹೆಚ್ಚಿನ ಲಾಭದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಹಣ ಡಬಲ್ ಆಗುತ್ತೆ, ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹಣಕಾಸು ಸಚಿವರೇ ಹೇಳುತ್ತಿರುವ ಅಸಲಿ ರೀತಿಯಲ್ಲೇ ಇರುವ ವಿಡಿಯೋ ನಂಬಿ ವ್ಯಕ್ತಿ ತನ್ನ ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿದ್ದರು.
ಆನಂತರ, ಅಕ್ಷರ ಗೌಡ ಎಂಬ ಹೆಸರಿನ ವ್ಯಕ್ತಿ ಆನಂದ ಉನ್ನಿಕೃಷ್ಣ ಅವರ ಅಸಿಸ್ಟೆಂಟ್ ಎಂದು ಪರಿಚಯಿಸಿಕೊಂಡು, ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಾಟ್ಸಪ್ ಮೂಲಕ ಹೂಡಿಕೆಗೆ ಪ್ರೇರೇಪಿಸಿದ್ದ. ಆರೋಪಿಗಳ ಮಾತು ನಂಬಿದ ವೃದ್ಧ ವ್ಯಕ್ತಿ ಡಿಸೆಂಬರ್ 18ರಂದು ₹3 ಲಕ್ಷ, ಡಿಸೆಂಬರ್ 26ರಂದು ₹7 ಲಕ್ಷ, ಜನವರಿ 6ರಂದು ₹3 ಲಕ್ಷ ಹಾಗೂ ಜನವರಿ 12ರಂದು ₹5.60 ಲಕ್ಷ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಒಟ್ಟು ₹18,81,000 ಹಣವನ್ನು ಹೂಡಿಕೆ ಮಾಡಿಸಿಕೊಂಡ ಆರೋಪಿಗಳು ₹1 ಕೋಟಿ ಲಾಭ ನೀಡುವುದಾಗಿ ನಂಬಿಸಿದ್ದರು. ಆದರೆ ಯಾವುದೇ ಲಾಭ ನೀಡದೆ ವಂಚಿಸಿದ್ದು ವಂಚನೆ ತಿಳಿಯುತ್ತಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 05:27 pm
HK News Staffer
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm