ಬ್ರೇಕಿಂಗ್ ನ್ಯೂಸ್
05-05-26 11:23 pm HK News Desk ಕ್ರೈಂ
ಮಂಗಳೂರು, ಮೇ 5: ಫೇಸ್ಬುಕ್, ಇನ್ಸ್ ಟಾ ಗ್ರಾಮ್ ರೀತಿಯ ಜಾಲತಾಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲೇ ನಕಲಿ ಎಐ ವಿಡಿಯೋ ಬಳಸಿ ಜನರನ್ನು ಯಾಮಾರಿಸುವ ಯತ್ನ ರಾಜಾರೋಷ ನಡೆಯುತ್ತಿದೆ. ಈ ಮೋಸದ ಜಾಲಕ್ಕೀಗ ಬುದ್ಧಿವಂತರ ಜಿಲ್ಲೆಯೆಂದು ಹಣೆಪಟ್ಟಿ ಹೊತ್ತಿರುವ ಮಂಗಳೂರಿನ ವ್ಯಕ್ತಿಯೇ ಬಲಿಯಾಗಿದ್ದಾರೆ. ನಕಲಿ ಆನ್ಲೈನ್ ಟ್ರೇಡಿಂಗ್ ಮೋಸದಲ್ಲಿ ಸಿಲುಕಿ 75 ವರ್ಷದ ಹಿರಿಯ ನಾಗರಿಕರೊಬ್ಬರು 18.81 ಲಕ್ಷ ರು. ಕಳಕೊಂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ನಲ್ಲಿ ಸಂತ್ರಸ್ತರು ಫೇಸ್ಬುಕ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಅವರ ರೀತಿಯಲ್ಲೇ ಭಾಷಣವಿರುವ ಆನ್ಲೈನ್ ಟ್ರೇಡಿಂಗ್ ಕುರಿತ ವಿಡಿಯೋವೊಂದನ್ನು ನೋಡಿದ್ದರು. ಇದನ್ನು ನಿಜವೆಂದು ನಂಬಿದ ಅವರು ವಿಡಿಯೋ ಕೆಳಗಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ವಿವರಗಳನ್ನು ನೋಂದಾಯಿಸಿದ್ದರು. ಇದಾದ ಬೆನ್ನಲ್ಲೇ ‘ಮೀನಾಕ್ಷಿ’ ಎಂಬ ಹೆಸರಿನ ವ್ಯಕ್ತಿಯಿಂದ ಕರೆ ಬಂದಿದ್ದು, ಹೆಚ್ಚಿನ ಲಾಭದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಹಣ ಡಬಲ್ ಆಗುತ್ತೆ, ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹಣಕಾಸು ಸಚಿವರೇ ಹೇಳುತ್ತಿರುವ ಅಸಲಿ ರೀತಿಯಲ್ಲೇ ಇರುವ ವಿಡಿಯೋ ನಂಬಿ ವ್ಯಕ್ತಿ ತನ್ನ ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿದ್ದರು.
ಆನಂತರ, ಅಕ್ಷರ ಗೌಡ ಎಂಬ ಹೆಸರಿನ ವ್ಯಕ್ತಿ ಆನಂದ ಉನ್ನಿಕೃಷ್ಣ ಅವರ ಅಸಿಸ್ಟೆಂಟ್ ಎಂದು ಪರಿಚಯಿಸಿಕೊಂಡು, ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಾಟ್ಸಪ್ ಮೂಲಕ ಹೂಡಿಕೆಗೆ ಪ್ರೇರೇಪಿಸಿದ್ದ. ಆರೋಪಿಗಳ ಮಾತು ನಂಬಿದ ವೃದ್ಧ ವ್ಯಕ್ತಿ ಡಿಸೆಂಬರ್ 18ರಂದು ₹3 ಲಕ್ಷ, ಡಿಸೆಂಬರ್ 26ರಂದು ₹7 ಲಕ್ಷ, ಜನವರಿ 6ರಂದು ₹3 ಲಕ್ಷ ಹಾಗೂ ಜನವರಿ 12ರಂದು ₹5.60 ಲಕ್ಷ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಒಟ್ಟು ₹18,81,000 ಹಣವನ್ನು ಹೂಡಿಕೆ ಮಾಡಿಸಿಕೊಂಡ ಆರೋಪಿಗಳು ₹1 ಕೋಟಿ ಲಾಭ ನೀಡುವುದಾಗಿ ನಂಬಿಸಿದ್ದರು. ಆದರೆ ಯಾವುದೇ ಲಾಭ ನೀಡದೆ ವಂಚಿಸಿದ್ದು ವಂಚನೆ ತಿಳಿಯುತ್ತಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 09:10 pm
HK News Staffer
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm