ಬ್ರೇಕಿಂಗ್ ನ್ಯೂಸ್
06-05-26 01:53 pm HK News Staffer ಕ್ರೈಂ
ಕಾರ್ಕಳ, ಮೇ 5: ಕ್ಯಾನ್ಸರ್ ರೋಗವನ್ನು ಆಯುರ್ವೇದಿಕ್ ಚಿಕಿತ್ಸೆ ಮೂಲಕ ಗುಣಪಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ಳಣ್ ಗ್ರಾಮದ ರೊನಾಲ್ಡ್ ರೋಡ್ರಿಗಸ್(68) ಎಂಬವರ ಪತ್ನಿಗೆ ಕ್ಯಾನ್ಸರ್ ಕಾಯಿಲೆ ಇದ್ದು ಮಾ.23ರಂದು ಅವರು ತನ್ನ ಹೆಂಡತಿಯನ್ನು ಫಿಸಿಯೋಥೆರಫಿಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ ರೋನಾಲ್ಡ್ ಅವರಿಗೆ ಉಡುಪಿಯ ಕಡಿಯಾಳಿ ದೇವಸ್ಥಾನದ ಬಳಿ ಸಿದ್ದಾರ್ಥ್ ಎಂಬಾತ ಪರಿಚಯವಾಗಿದ್ದು, ಆತ ಆಯುರ್ವೇದಿಕ್ ಚಿಕಿತ್ಸೆ ಮೂಲಕ ನಿಮ್ಮ ಪತ್ನಿಯ ರೋಗ ಗುಣಪಡಿಸಬಹುದು ಎಂದು ನಂಬಿಸಿದ್ದಾನೆ.
ಅದರಂತೆ ರೋನಾಲ್ಡ್ ಸಿದ್ದಾರ್ಥ್ ಪರಿಚಯಿಸಿದ ಮಾಧವ ಎಂಬಾತ ಸೂಚಿಸಿದ ಅನಿಲ್ ಪವಾರ್ ಎಂಬ ಹೆಸರಿನ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ 40,000ರೂ. ಹಣವನ್ನು ಸಿದ್ದಾರ್ಥ್ಗೆ ನೀಡಿದ್ದರು.ಅಲ್ಲದೆ ಆರೋಪಿ ಉಡುಪಿಯ ಆರ್ಯುವೇದಿಕ್ ಔಷಧಿ ಅಂಗಡಿಯಲ್ಲಿನ ಔಷದಿ ಖರೀದಿಸಿ ಸೇವಿಸಿದರೆ ಖಾಯಿಲೆ ಗುಣ ಆಗುತ್ತದೆ ಎಂದು ಹೇಳಿದ್ದು ಅದರಂತೆ 10,80,000ರೂ.
ಮೊತ್ತದ ಚೆಕ್ ನೀಡಿ ಔಷಧಿ ಖರೀದಿಸಿದ್ದರು. ಆದರೆ ಈ ಔಷಧಿಗಳನ್ನು ತಮ್ಮ ಪತ್ನಿಗೆ ನೀಡಿದರೂ ಈವರೆಗೆ ಗುಣಮುಖರಾಗದೇ ಇದ್ದ ಕಾರಣ ರೋನಾಲ್ಡ್ ಆರೋಪಿಗಳಿಗೆ ಕರೆ ಮಾಡಿದ್ದರು. ಆದರೆ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಆರೋಪಿಗಳು ರೋನಾಲ್ಡ್ ಹೆಂಡತಿಗೆ ಇರುವ ಖಾಯಿಲೆಯನ್ನು ಗುಣಪಡಿಸುವುದಾಗಿ ನಂಬಿಸಿ ಒಟ್ಟು 12,09,160ರೂ. ವಂಚಿಸಿರುವುದಾಗಿ ದೂರಲಾಗಿದೆ.
06-06-26 12:49 pm
HK News Staffer
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
ಡಿಕೆಶಿ ಸಂಪುಟದಲ್ಲಿ ಮೊದಲ ವಿಕೆಟ್ ಪತನ ; ಖಾತೆ ಹಂಚಿ...
05-06-26 10:29 am
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
05-06-26 01:25 pm
HK News Staffer
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
06-06-26 09:01 pm
HK News Staffer
ನ್ಯಾಯಾಲಯದ ವಾರಂಟ್ ತಪ್ಪಿಸಿ ತಲೆಮರೆಸಿಕೊಂಡಿದ್ದ ಇಬ್...
06-06-26 05:04 pm
ಐಸಿಸ್ ಉಗ್ರನೊಂದಿಗೆ ಸಂಪರ್ಕ; ತುಮಕೂರಿನಲ್ಲಿ ಇಬ್ಬರ...
06-06-26 04:59 pm
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; ವಿದ...
06-06-26 01:18 pm
ಮೆಲ್ಕಾರ್ ಫ್ಲೈಓವರ್ ಬಳಿ ಡ್ರಗ್ಸ್ ಬೇಟೆ ; 7.64 ಲಕ್...
05-06-26 09:58 pm