ಬ್ರೇಕಿಂಗ್ ನ್ಯೂಸ್
07-05-26 12:17 pm HK News Staffer ಕ್ರೈಂ
ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿ ಸರ್ಕಾರ ರಚನೆಗೆ ಸಜ್ಜಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯವನ್ನು ನಡುಗಿಸುವ ಭೀಕರ ಘಟನೆ ನಡೆದಿದೆ. ಪ್ರತಿಪಕ್ಷ ನಾಯಕ ಹಾಗೂ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಸಮೀಪದ ದೊಹರಿಯಾ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. 41 ವರ್ಷದ ಚಂದ್ರನಾಥ್ ರಥ್ ಸಾರ್ವಜನಿಕ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅವರ ವಾಹನವನ್ನು ತಡೆದು ಪಾಯಿಂಟ್ ಬ್ಲ್ಯಾಂಕ್ನಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಆಕ್ರೋಶ ವ್ಯಕ್ತಪಡಿಸಿರುವ ಸುವೇಂದು ಅಧಿಕಾರಿ, “ಇದು ಆಕಸ್ಮಿಕ ಹತ್ಯೆಯಲ್ಲ, ಸಂಪೂರ್ಣ ಪೂರ್ವಯೋಜಿತ ಕೋಲ್ಡ್ ಬ್ಲಡ್ ಮರ್ಡರ್. ಹಂತಕರು ಕಳೆದ ಎರಡು-ಮೂರು ದಿನಗಳಿಂದ ರಥ್ ಅವರ ಚಲನವಲನಗಳ ಮೇಲೆ ನಿಗಾವಹಿಸಿದ್ದರು” ಎಂದು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರೂ ಸಹ ಇದು ಯೋಜಿತ ಕೃತ್ಯ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಮತ್ತೊಂದೆಡೆ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. “ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಇದು ಟಿಎಂಸಿಯ ‘ಜಂಗಲ್ ರಾಜ್’ಗೆ ಜೀವಂತ ಸಾಕ್ಷಿ” ಎಂದು ಸುವೇಂದು ಅಧಿಕಾರಿ ಕಿಡಿಕಾರಿದರು. ಆದರೆ ಇದೇ ವೇಳೆ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ರಾತ್ರಿ ಸುಮಾರು 10:30ರ ವೇಳೆಗೆ ಮಧ್ಯಗ್ರಾಮ್ನ ಡೋಲ್ತಾಲಾ ಗ್ರಾಮದ ಬಳಿ ಮೋಟಾರ್ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಘಟನಾ ಸ್ಥಳದಿಂದ ಪೊಲೀಸರು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ವಿಶೇಷ ತಂಡಗಳ ಮೂಲಕ ತನಿಖೆ ಚುರುಕುಗೊಳಿಸಲಾಗಿದೆ.
ಇದೀಗ ರಾಜ್ಯ ರಾಜಕೀಯದಲ್ಲಿ ಈ ಘಟನೆ ಭಾರೀ ಸಂಚಲನ ಮೂಡಿಸಿದೆ. ಚುನಾವಣೆಯಲ್ಲಿ ಬಿಜೆಪಿ 294 ಸ್ಥಾನಗಳ ಪೈಕಿ 207 ಸ್ಥಾನಗಳನ್ನು ಗೆದ್ದು ಬಹುಮತ ಸಾಧಿಸಿದ್ದು, ಟಿಎಂಸಿ 80 ಸ್ಥಾನಗಳಿಗೆ ಕುಸಿದಿದೆ. ಮೇ 9ರಂದು ಬಿಜೆಪಿ ಮೊದಲ ಬಾರಿಗೆ ಬಂಗಾಳದಲ್ಲಿ ಸರ್ಕಾರ ರಚಿಸಲು ಸಿದ್ಧವಾಗಿರುವ ಸಂದರ್ಭದಲ್ಲೇ ಈ ಹತ್ಯೆ ನಡೆದಿರುವುದು ರಾಜಕೀಯ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಇನ್ನೊಂದೆಡೆ, ಸೋಲಿನ ವಿರುದ್ಧ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿರುವಾಗಲೇ ಈ ಹತ್ಯೆ ಪ್ರಕರಣ ಬಂಗಾಳದ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm