ಬ್ರೇಕಿಂಗ್ ನ್ಯೂಸ್
08-05-26 06:20 pm HK News Staffer ಕ್ರೈಂ
ಮಡಿಕೇರಿ, ಮೇ 8: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಚಾಲಕನಿಗೆ ಹಠಾತ್ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ಇಂದು ಮುಂಜಾನೆ ಸಂಭವಿಸಿದೆ.
‘ಪೂರ್ಣಿಮಾ ಟ್ರಾವೆಲ್ಸ್’ ಬಸ್ ಬೆಂಗಳೂರಿನಿಂದ ಮಡಿಕೇರಿಯಿಂದ ಕಡೆಗೆ ಹೊರಟ್ಟಿತ್ತು. ಬೆಳಗ್ಗೆ ಐದು ಗಂಟೆ ಸುಮಾರಿಗೆ ತಾಲೂಕಿನ ತಾಳತ್ ಮನೆ ಬಳಿ ಚಲಿಸುತ್ತಿದ್ದ ವೇಳೆ ಬಸ್ನಲ್ಲೇ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಇದರಿಂದ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಇಳಿಜಾರಿಗೆ ವಾಲಿಕೊಂಡಿದೆ.
ಹೃದಯಾಘಾತವಾಗುತ್ತಿದ್ದಂತೆಯೇ ಚಾಲಕ ತನ್ನ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡು ಬಸ್ ಅನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದಾನೆ. ತೀವ್ರ ನೋವಿನ ನಡುವೆಯೂ ಬಸ್ ಚಾಲಕ ಬಸ್ ಅನ್ನು ಚರಂಡಿಯ ಸಮೀಪ ನಿಲ್ಲಿಸಲು ಯಶಸ್ವಿಯಾಗಿದ್ದು, ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಘಟನೆ ವೇಳೆ ಬಸ್ ಸ್ವಲ್ಪ ವಾಲಿಕೊಂಡಿದ್ದರೂ, ಪ್ರಯಾಣಿಕರ ಜೀವಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ತೀವ್ರ ಹೃದಯಾಘಾತದಿಂದ ಚಾಲಕ ಬಸ್ನಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಮಡಿಕೇರಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ರಸ್ತೆ ಬದಿಯಲ್ಲಿ ನಿಂತಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಆತಂಕಗೊಂಡಿದ್ದ ಪ್ರಯಾಣಿಕರಿಗೆ ಬದಲಿ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರನ್ನು ಸುರಕ್ಷಿತವಾಗಿ ಗಮ್ಯಸ್ಥಾನಕ್ಕೆ ಕಳುಹಿಸಲಾಗಿದೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm