ಬ್ರೇಕಿಂಗ್ ನ್ಯೂಸ್
08-05-26 07:02 pm HK News Staffer ಕ್ರೈಂ
ಪುತ್ತೂರು, ಮೇ 8: ಕಡಬ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಕರೆದುಕೊಂಡು ಬಂದು ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಡಬ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು ಯಾವುದೇ ಅಂತಹ ಚಟುವಟಿಕೆ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಮೇ 07ರಂದು ಐತ್ತೂರಿನ ಮನೆಯೊಂದರಲ್ಲಿ ಜನ ಹೆಚ್ಚು ಸೇರಿರುವ ಬಗ್ಗೆ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ್ದು ಒಟ್ಟು 4 ಕುಟುಂಬಗಳಿಗೆ ಸೇರಿದ 23 ಜನ ಗಂಡಸರು, ಮಹಿಳೆಯರು ಹಾಗೂ ಮಕ್ಕಳು ಅಲ್ಲಿ ಇರುವುದಾಗಿ ಕಂಡುಬಂದಿದೆ. ವಿಚಾರಣೆಯಲ್ಲಿ ಅವರುಗಳೆಲ್ಲರೂ ಬೆಂಗಳೂರಿನ ಪರಿಚಯದವರಾಗಿದ್ದು, ಮಂಗಳೂರಿಗೆ ಪ್ರವಾಸದ ನಿಮಿತ್ತ ಬಂದಿರುವುದಾಗಿ ತಿಳಿಸಿರುತ್ತಾರೆ.
ಹಲವು ವರ್ಷಗಳಿಂದ ಪರಿಚಯವಿರುವ ಬೆಂಗಳೂರಿನ ಚರ್ಚ್ ಒಂದರ ಫಾದರ್ ಅವರ ತಮ್ಮನ ಕಡಬದ ಮನೆಯಲ್ಲಿ ತಂಗಿರುವುದಾಗಿ ತಿಳಿಸಿರುತ್ತಾರೆ. ವಿಚಾರಣೆಯಲ್ಲಿ ಎಲ್ಲರೂ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದು, ಸುಮಾರು 15 ರಿಂದ 20 ವರ್ಷಗಳಿಂದ ಕ್ರಿಶ್ಚಿಯನ್ ಧರ್ಮವನ್ನು ಸ್ವಯಂಪ್ರೇರಿತವಾಗಿ ಪಾಲಿಸಿಕೊಂಡು ಬರುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಯಾವುದೇ ಬಲವಂತದ ಮತಾಂತರ ನಡೆದಿರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಸದರಿ ವಿಚಾರದಲ್ಲಿ ಯಾವುದೇ ಅನೈತಿಕ ಚಟುವಟಿಕೆ ಅಥವಾ ಬಲವಂತದ ಮತಾಂತರ ನಡೆದಿರುವ ಬಗ್ಗೆ ವಿಚಾರಣೆ ವೇಳೆ ಮಾಹಿತಿ ದೊರೆತಿರುವುದಿಲ್ಲ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
06-06-26 12:49 pm
HK News Staffer
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
ಡಿಕೆಶಿ ಸಂಪುಟದಲ್ಲಿ ಮೊದಲ ವಿಕೆಟ್ ಪತನ ; ಖಾತೆ ಹಂಚಿ...
05-06-26 10:29 am
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
05-06-26 01:25 pm
HK News Staffer
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
06-06-26 09:01 pm
HK News Staffer
ನ್ಯಾಯಾಲಯದ ವಾರಂಟ್ ತಪ್ಪಿಸಿ ತಲೆಮರೆಸಿಕೊಂಡಿದ್ದ ಇಬ್...
06-06-26 05:04 pm
ಐಸಿಸ್ ಉಗ್ರನೊಂದಿಗೆ ಸಂಪರ್ಕ; ತುಮಕೂರಿನಲ್ಲಿ ಇಬ್ಬರ...
06-06-26 04:59 pm
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; ವಿದ...
06-06-26 01:18 pm
ಮೆಲ್ಕಾರ್ ಫ್ಲೈಓವರ್ ಬಳಿ ಡ್ರಗ್ಸ್ ಬೇಟೆ ; 7.64 ಲಕ್...
05-06-26 09:58 pm