ಬ್ರೇಕಿಂಗ್ ನ್ಯೂಸ್
08-05-26 07:02 pm HK News Staffer ಕ್ರೈಂ
ಪುತ್ತೂರು, ಮೇ 8: ಕಡಬ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಕರೆದುಕೊಂಡು ಬಂದು ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಡಬ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು ಯಾವುದೇ ಅಂತಹ ಚಟುವಟಿಕೆ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಮೇ 07ರಂದು ಐತ್ತೂರಿನ ಮನೆಯೊಂದರಲ್ಲಿ ಜನ ಹೆಚ್ಚು ಸೇರಿರುವ ಬಗ್ಗೆ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ್ದು ಒಟ್ಟು 4 ಕುಟುಂಬಗಳಿಗೆ ಸೇರಿದ 23 ಜನ ಗಂಡಸರು, ಮಹಿಳೆಯರು ಹಾಗೂ ಮಕ್ಕಳು ಅಲ್ಲಿ ಇರುವುದಾಗಿ ಕಂಡುಬಂದಿದೆ. ವಿಚಾರಣೆಯಲ್ಲಿ ಅವರುಗಳೆಲ್ಲರೂ ಬೆಂಗಳೂರಿನ ಪರಿಚಯದವರಾಗಿದ್ದು, ಮಂಗಳೂರಿಗೆ ಪ್ರವಾಸದ ನಿಮಿತ್ತ ಬಂದಿರುವುದಾಗಿ ತಿಳಿಸಿರುತ್ತಾರೆ.
ಹಲವು ವರ್ಷಗಳಿಂದ ಪರಿಚಯವಿರುವ ಬೆಂಗಳೂರಿನ ಚರ್ಚ್ ಒಂದರ ಫಾದರ್ ಅವರ ತಮ್ಮನ ಕಡಬದ ಮನೆಯಲ್ಲಿ ತಂಗಿರುವುದಾಗಿ ತಿಳಿಸಿರುತ್ತಾರೆ. ವಿಚಾರಣೆಯಲ್ಲಿ ಎಲ್ಲರೂ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದು, ಸುಮಾರು 15 ರಿಂದ 20 ವರ್ಷಗಳಿಂದ ಕ್ರಿಶ್ಚಿಯನ್ ಧರ್ಮವನ್ನು ಸ್ವಯಂಪ್ರೇರಿತವಾಗಿ ಪಾಲಿಸಿಕೊಂಡು ಬರುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಯಾವುದೇ ಬಲವಂತದ ಮತಾಂತರ ನಡೆದಿರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಸದರಿ ವಿಚಾರದಲ್ಲಿ ಯಾವುದೇ ಅನೈತಿಕ ಚಟುವಟಿಕೆ ಅಥವಾ ಬಲವಂತದ ಮತಾಂತರ ನಡೆದಿರುವ ಬಗ್ಗೆ ವಿಚಾರಣೆ ವೇಳೆ ಮಾಹಿತಿ ದೊರೆತಿರುವುದಿಲ್ಲ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm