ಬ್ರೇಕಿಂಗ್ ನ್ಯೂಸ್
09-05-26 09:54 am HK News Staffer ಕ್ರೈಂ
ಪುತ್ತೂರು, ಮೇ 09 : ಬೇಸಿಗೆ ರಜೆಯ ಸಂಭ್ರಮದಲ್ಲಿ ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ನಡೆದಿದೆ.
ಮೃತರನ್ನು ಅರ್ಪಿತಾ (15) ಹಾಗೂ ಸುನೀತಾ (21) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ. ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ದುರಂತ
ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಸ್ನೇಹಿತರ ಬಳಗ ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿತ್ತು. ಸಂಜೆ ಸುಮಾರು 4:30ರ ವೇಳೆಗೆ ಎಲ್ಲರೂ ನದಿಯಲ್ಲಿ ಈಜಾಡುತ್ತಿದ್ದಾಗ, ಅರ್ಪಿತಾ ಮತ್ತು ಸುನೀತಾ ನೀರಿನ ಆಳಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ಸ್ಥಳೀಯರಿಂದ ಶೋಧ ಕಾರ್ಯ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿ ಜಾರ್ಜ್ ಎಂಬವರು ನೀರಿನಲ್ಲಿ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಕುಟ್ರುಪ್ಪಾಡಿ ಭಾಗದ ನದಿ ಪ್ರದೇಶ ಈ ಹಿಂದೆಯೂ ಅಪಾಯಕಾರಿಯಾಗಿತ್ತು ಎನ್ನಲಾಗಿದೆ. ಇದೇ ಸ್ಥಳದಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗ್ರಾಮಸ್ಥರ ನೆನಪಿನಲ್ಲಿ ಇನ್ನೂ ಹಸಿರಾಗಿರುವಾಗಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ.
ಕನಸುಗಳೇ ನೀರಿನಲ್ಲಿ ಕರಗಿ ಹೋಯ್ತು
ರಜೆಯ ದಿನಗಳನ್ನು ಖುಷಿಯಿಂದ ಕಳೆಯಲು ತೆರಳಿದ್ದ ಈ ಬಾಲಕಿಯರು, ಮುಂದಿನ ಭವಿಷ್ಯದ ಅನೇಕ ಕನಸುಗಳನ್ನು ಹೊತ್ತಿದ್ದರು. ಆದರೆ ಕ್ಷಣ ಮಾತ್ರದ ಅಜಾಗರೂಕತೆ ಅವರ ಬದುಕನ್ನೇ ಕಸಿದುಕೊಂಡಿದೆ. ನಗುನಗುತ್ತಾ ಹೊರಟಿದ್ದ ಮಕ್ಕಳು ಶವವಾಗಿ ಮನೆಗೆ ಮರಳಿರುವ ದೃಶ್ಯ ಪೋಷಕರ ಆಕ್ರಂದನಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ಆವರಿಸಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm