ಬ್ರೇಕಿಂಗ್ ನ್ಯೂಸ್
09-05-26 09:54 am HK News Staffer ಕ್ರೈಂ
ಪುತ್ತೂರು, ಮೇ 09 : ಬೇಸಿಗೆ ರಜೆಯ ಸಂಭ್ರಮದಲ್ಲಿ ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ನಡೆದಿದೆ.
ಮೃತರನ್ನು ಅರ್ಪಿತಾ (15) ಹಾಗೂ ಸುನೀತಾ (21) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ. ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ದುರಂತ
ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಸ್ನೇಹಿತರ ಬಳಗ ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿತ್ತು. ಸಂಜೆ ಸುಮಾರು 4:30ರ ವೇಳೆಗೆ ಎಲ್ಲರೂ ನದಿಯಲ್ಲಿ ಈಜಾಡುತ್ತಿದ್ದಾಗ, ಅರ್ಪಿತಾ ಮತ್ತು ಸುನೀತಾ ನೀರಿನ ಆಳಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ಸ್ಥಳೀಯರಿಂದ ಶೋಧ ಕಾರ್ಯ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿ ಜಾರ್ಜ್ ಎಂಬವರು ನೀರಿನಲ್ಲಿ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಕುಟ್ರುಪ್ಪಾಡಿ ಭಾಗದ ನದಿ ಪ್ರದೇಶ ಈ ಹಿಂದೆಯೂ ಅಪಾಯಕಾರಿಯಾಗಿತ್ತು ಎನ್ನಲಾಗಿದೆ. ಇದೇ ಸ್ಥಳದಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗ್ರಾಮಸ್ಥರ ನೆನಪಿನಲ್ಲಿ ಇನ್ನೂ ಹಸಿರಾಗಿರುವಾಗಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ.
ಕನಸುಗಳೇ ನೀರಿನಲ್ಲಿ ಕರಗಿ ಹೋಯ್ತು
ರಜೆಯ ದಿನಗಳನ್ನು ಖುಷಿಯಿಂದ ಕಳೆಯಲು ತೆರಳಿದ್ದ ಈ ಬಾಲಕಿಯರು, ಮುಂದಿನ ಭವಿಷ್ಯದ ಅನೇಕ ಕನಸುಗಳನ್ನು ಹೊತ್ತಿದ್ದರು. ಆದರೆ ಕ್ಷಣ ಮಾತ್ರದ ಅಜಾಗರೂಕತೆ ಅವರ ಬದುಕನ್ನೇ ಕಸಿದುಕೊಂಡಿದೆ. ನಗುನಗುತ್ತಾ ಹೊರಟಿದ್ದ ಮಕ್ಕಳು ಶವವಾಗಿ ಮನೆಗೆ ಮರಳಿರುವ ದೃಶ್ಯ ಪೋಷಕರ ಆಕ್ರಂದನಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ಆವರಿಸಿದೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm