ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm