ಬ್ರೇಕಿಂಗ್ ನ್ಯೂಸ್
09-05-26 06:42 pm HK News Staffer ಕ್ರೈಂ
ಬೆಂಗಳೂರು, ಮೇ 9: ಯಾದಗಿರಿ ಜಿಲ್ಲೆಯ ಗುರುಮಠಕಲ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಾತಿ ನಿಂದನೆ ಪ್ರಕರಣದಿಂದ ಆರೋಪಿಯನ್ನು ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ಇನಾಂದಾರ್ ನೇತೃತ್ವದ ತಂಡ ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದೆ.
ಆರೋಪಿಯನ್ನು ಬಂಧಿಸದಿರಲು ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದ ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಕೇಸ್ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಂದು ಲಕ್ಷ ರೂ. ಹಣವನ್ನು ಪಡೆಯಲು ಒಪ್ಪಂದವಾಗಿತ್ತು ಎಂದವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಗುರುಮಠಕಲ್ನ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ಒಂದು ಲಕ್ಷ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಇನ್ಸ್ ಪೆಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm