ಬ್ರೇಕಿಂಗ್ ನ್ಯೂಸ್
09-05-26 10:29 pm HK News Desk ಕ್ರೈಂ
ಮಂಗಳೂರು, ಮೇ 9: ನಗರದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಪಾಸಣೆ ನಡೆಸಿದಾಗ ಆತನ ಕೈಯಲ್ಲಿ ಅಪಾರ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿದ್ದು ವಿಚಾರಣೆಯಲ್ಲಿ ಅವುಗಳನ್ನು ತ್ರಿಶ್ಶೂರಿನಿಂದ ಕದ್ದು ತಂದದ್ದೆಂದು ತಿಳಿಸಿದ್ದರಿಂದ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಞಂಗಾಡ್ ನಿವಾಸಿ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಆತನ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದಾಗ, 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್ಲೆಟ್ ಹಾಗೂ ಸ್ಟಡ್ಗಳಿದ್ದವು.
ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಠಾಣೆಯಲ್ಲಿ ಮೇ 6ರಂದು ದಾಖಲಾದ ಕಳ್ಳತನ ಪ್ರಕರಣದಲ್ಲಿ ಹತ್ತು ಪವನ್ ಬಂಗಾರ ಕಳವಾಗಿರುವುದು ತಿಳಿದುಬಂದಿತ್ತು. ಬಳಿಕ ಕೇರಳ ಪೊಲೀಸರನ್ನು ಸಂಪರ್ಕಿಸಿ, ಆರೋಪಿಯನ್ನು ವಿಚಾರಣೆ ನಡೆಸಿದಾಗ ಮನೆ ಕಳವು ಪ್ರಕರಣ ಒಪ್ಪಿಕೊಂಡಿದ್ದಾನೆ. ಎರ್ನಾಕುಳಂ ಮತ್ತು ಕಾಸರಗೋಡು ಜಿಲ್ಲೆಯ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಮನೆ ಕಳವು ಪ್ರಕರಣಗಳಲ್ಲಿ ಅಶ್ರಫ್ ಆರೋಪಿಯಾಗಿದ್ದು ಕೋರ್ಟಿನಿಂದ ವಾರಂಟ್ಗಳಿದ್ದರೂ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಪಾವರಟ್ಟಿ ಪೊಲೀಸರು ಮಂಗಳೂರಿಗೆ ಬಂದು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 08:41 pm
HK News Staffer
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm
Shivanand Neelannavar 4500 Fraud: ಶಿವಂ ಅಸೋಸಿಯ...
16-05-26 10:24 pm