ಬ್ರೇಕಿಂಗ್ ನ್ಯೂಸ್
12-05-26 01:11 pm HK News Staffer ಕ್ರೈಂ
ಮಂಗಳೂರು, ಮೇ 12 : ದೇಶವ್ಯಾಪಿ ಗಮನ ಸೆಳೆದಿದ್ದ "ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಸಲುವಾಗಿ 17 ಸ್ಥಳಗಳಲ್ಲಿ ಅಗೆಯಲು ಬಳಸಿದ್ದ ಜೆಸಿಬಿ ಮತ್ತು ಕಾರ್ಮಿಕರ ವೆಚ್ಚವನ್ನು ಇನ್ನೂ ಪಾವತಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
2025ರ ಜುಲೈ 29ರಿಂದ ಆಗಸ್ಟ್ 13ರ ವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ಜೆಸಿಬಿ ಮತ್ತು ಕೂಲಿಯಾಳುಗಳನ್ನು ಬಳಸಿ ಮಳೆ, ಬಿಸಿಲು ಲೆಕ್ಕಿಸದೇ ಕೆಲಸ ಮಾಡಿಸಲಾಗಿತ್ತು. ಇದಾಗಿ 10 ತಿಂಗಳು ಕಳೆದರೂ ಜೆಸಿಬಿ ಬಾಡಿಗೆ, ವಾಹನ ಬಾಡಿಗೆ ಹಾಗೂ ಕಾರ್ಮಿಕರ ಕೂಲಿ ಸೇರಿ ಲಕ್ಷಾಂತರ ಬಿಲ್ ಬಾಕಿ ಉಳಿದಿದೆ. ಹಿಟಾಚಿ ಯಂತ್ರ ಬಳಕೆ, ಶಾಮಿಯಾನ, ಹಾರೆ, ಪಿಕಾಸು, ಕುಡಿಯುವ ನೀರು ವ್ಯವಸ್ಥೆ ಸೇರಿದಂತೆ ಹಲವು ವೆಚ್ಚಗಳಿಗೆ ಪಾವತಿ ಇನ್ನೂ ಆಗಿಲ್ಲ ಎಂದು ತಿಳಿದುಬಂದಿದೆ.
ಲಭ್ಯ ಮಾಹಿತಿಯ ಪ್ರಕಾರ, ಉತ್ಖನನ ಕಾರ್ಯಕ್ಕೆ ಸುನೀಲ್ ಕನ್ಯಾಡಿ ಎಂಬವರ ಹಿಟಾಚಿ ಯಂತ್ರ ಬಳಸಲಾಗಿತ್ತು. ಕೇವಲ 10 ದಿನಗಳಷ್ಟೇ ಯಂತ್ರವನ್ನು ಬಳಸಲಾಗಿದ್ದರೂ, ಬಳಕೆಯಾದ ದಿನಗಳಿಗಷ್ಟೇ ಬಿಲ್ ಪಾವತಿಸಬೇಕೆಂದು ಮಾಲಕರು ಮನವಿ ಮಾಡಿದ್ದರು. ಆದರೆ 9 ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಯಾವುದೇ ಹಣ ದೊರೆತಿಲ್ಲ ಎಂಬುದು ಆರೋಪವಾಗಿದೆ.
ಬಿಲ್ ಪಾವತಿ ವಿಚಾರದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಹಾಗೂ ಎಸ್ಐಟಿ ನಡುವೆ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಪಂಚಾಯತ್ ಅಧಿಕಾರಿಗಳು ಎಸ್ಐಟಿ ಕಡೆಗೆ ಬೆರಳು ತೋರಿಸುತ್ತಿದ್ದು, ಎಸ್ಐಟಿ ಮಾತ್ರ ನವೆಂಬರ್ನಲ್ಲೇ ಬಿಲ್ ಪಾವತಿಸಲಾಗಿದೆ ಎಂದು ಹೇಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಇದೇ ವೇಳೆ, ಉತ್ಖನನ ಸಂದರ್ಭದಲ್ಲಿ ಇದ್ದ ಪಂಚಾಯತ್ ಪಿಡಿಒ ಈಗ ನಿವೃತ್ತರಾಗಿದ್ದು ಯಾರನ್ನು ಕೇಳುವುದೆಂಬ ಗೊಂದಲ ಉಂಟಾಗಿದೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm