ಬ್ರೇಕಿಂಗ್ ನ್ಯೂಸ್
13-05-26 11:44 am HK News Staffer ಕ್ರೈಂ
ಬೆಂಗಳೂರು, ಮೇ 13: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ಮತ್ತು ಡಬ್ಬಿಂಗ್ ಕಲಾವಿದರಾಗಿದ್ದ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಸಿನಿಮಾ ಮತ್ತು ಧಾರಾವಾಹಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್ ಅಕಾಲಿಕ ನಿಧನ ಚಂದನವನಕ್ಕೆ ದೊಡ್ಡ ಆಘಾತ ಉಂಟುಮಾಡಿದೆ.
ಮನೆಯಲ್ಲಿದ್ದ ವೇಳೆ ದಿಲೀಪ್ ರಾಜ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ.
2005ರಲ್ಲಿ ಬಿಡುಗಡೆಯಾದ ‘ಬಾಯ್ಫ್ರೆಂಡ್’ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ದಿಲೀಪ್ ರಾಜ್, ತಮ್ಮ ಸಹಜ ಅಭಿನಯದಿಂದಲೇ ಗಮನ ಸೆಳೆದಿದ್ದರು. ಬಳಿಕ ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’, ‘ಪಂಚಾಮೃತ’, ‘ಪರಿಚಯ’, ‘ಬಾರ್ಡರ್’ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಪ್ರೇಕ್ಷಕರ ಮನಗೆದ್ದಿದ್ದರು. ವಿಶೇಷವಾಗಿ ‘ಮಿಲನ’ ಚಿತ್ರದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಸಹೋದರನ ಪಾತ್ರದಲ್ಲಿ ಅಭಿನಯಿಸಿ ಅಪಾರ ಜನಪ್ರಿಯತೆ ಗಳಿಸಿದ್ದರು.
ಚಿತ್ರರಂಗದ ಜೊತೆಗೆ ಕಿರುತೆರೆಯಲ್ಲೂ ದಿಲೀಪ್ ರಾಜ್ ತಮ್ಮದೇ ಆದ ಛಾಪು ಮೂಡಿಸಿದ್ದರು. ‘ಜನನಿ’ ಧಾರಾವಾಹಿಯ ಮೂಲಕ ಕಿರುತೆರೆಯಲ್ಲಿ ಪಯಣ ಆರಂಭಿಸಿದ ಅವರು, ನಂತರ ಯಶಸ್ವಿ ನಿರ್ಮಾಪಕರಾಗಿಯೂ ಹೊರಹೊಮ್ಮಿದರು. ಪತ್ನಿ ಶ್ರೀವಿದ್ಯಾ ಅವರೊಂದಿಗೆ ಸೇರಿ ಡಿ2ಆರ್ ಮೀಡಿಯಾ ಪ್ರೊಡಕ್ಷನ್ಸ್ ಮೂಲಕ ಹಲವು ಜನಪ್ರಿಯ ಧಾರಾವಾಹಿಗಳನ್ನು ನಿರ್ಮಿಸಿದ್ದರು. ಜೀ ಕನ್ನಡ ವಾಹಿನಿಯ ಸೂಪರ್ ಹಿಟ್ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಅವರ ನಿರ್ಮಾಣದ ಅತಿದೊಡ್ಡ ಯಶಸ್ಸಾಗಿದ್ದು, ಅದರಲ್ಲಿ ‘ಅಭಿರಾಮ್ ಜಯಶಂಕರ್’ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’, ‘ಕೃಷ್ಣ ರುಕ್ಕು’ ಸೇರಿದಂತೆ ಹಲವು ಧಾರಾವಾಹಿಗಳ ಮೂಲಕವೂ ಅವರು ಕಿರುತೆರೆ ಪ್ರೇಕ್ಷಕರ ಹೃದಯ ಗೆದ್ದಿದ್ದರು.
ನಟನೆ ಮಾತ್ರವಲ್ಲದೆ, ಡಬ್ಬಿಂಗ್ ಕಲಾವಿದರಾಗಿಯೂ ಅವರು ಗುರುತಿಸಿಕೊಂಡಿದ್ದರು. ಶಿಸ್ತು, ಸಮಯಪ್ರಜ್ಞೆ ಮತ್ತು ಸ್ನೇಹಪರ ವ್ಯಕ್ತಿತ್ವದಿಂದ ದಿಲೀಪ್ ರಾಜ್ ಎಲ್ಲರ ಮೆಚ್ಚುಗೆ ಪಡೆದಿದ್ದರು.
ಹಿರಿಯ ನಟ ದೊಡ್ಡಣ್ಣ ಅವರು ದಿಲೀಪ್ ರಾಜ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, “ದಿಲೀಪ್ ರಾಜ್ ಅವರ ತಂದೆ ಹೆಚ್.ಎಂ. ಶಿವರುದ್ರಪ್ಪ ಅವರು ನಮ್ಮ ಕುಟುಂಬದ ಆತ್ಮೀಯರು. ದಿಲೀಪ್ ರಾಜ್ ನಮ್ಮ ಮಕ್ಕಳಂತಿದ್ದರು. ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು” ಎಂದು ಹೇಳಿದ್ದಾರೆ.
ಕಲಾಭಿಮಾನಿಗಳ ಹೃದಯದಲ್ಲಿ ಸದಾ ಜೀವಂತವಾಗಿರುವ ದಿಲೀಪ್ ರಾಜ್ ಅವರ ನಗುಮುಖ, ಸರಳತೆ ಮತ್ತು ಕಲಾಪ್ರೇಮ ಕನ್ನಡ ಚಿತ್ರರಂಗಕ್ಕೆ ಎಂದಿಗೂ ಮರೆಯಲಾಗದ ನೆನಪಾಗಿ ಉಳಿಯಲಿದೆ.
ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ಸಮಾನವಾಗಿ ಯಶಸ್ಸು ಕಂಡ ದಿಲೀಪ್ ರಾಜ್, ತಮ್ಮ ಪ್ರತಿಭೆ ಮತ್ತು ಪರಿಶ್ರಮದಿಂದ ಕನ್ನಡ ಮನಗಳಿಗೆ ಹತ್ತಿರವಾದ ಕಲಾವಿದರಾಗಿದ್ದರು. ಅವರ ಅಗಲಿಕೆ ಕನ್ನಡ ಮನರಂಜನಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm