ಬ್ರೇಕಿಂಗ್ ನ್ಯೂಸ್
13-05-26 11:44 am HK News Staffer ಕ್ರೈಂ
ಬೆಂಗಳೂರು, ಮೇ 13: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ಮತ್ತು ಡಬ್ಬಿಂಗ್ ಕಲಾವಿದರಾಗಿದ್ದ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಸಿನಿಮಾ ಮತ್ತು ಧಾರಾವಾಹಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್ ಅಕಾಲಿಕ ನಿಧನ ಚಂದನವನಕ್ಕೆ ದೊಡ್ಡ ಆಘಾತ ಉಂಟುಮಾಡಿದೆ.
ಮನೆಯಲ್ಲಿದ್ದ ವೇಳೆ ದಿಲೀಪ್ ರಾಜ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ.
2005ರಲ್ಲಿ ಬಿಡುಗಡೆಯಾದ ‘ಬಾಯ್ಫ್ರೆಂಡ್’ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ದಿಲೀಪ್ ರಾಜ್, ತಮ್ಮ ಸಹಜ ಅಭಿನಯದಿಂದಲೇ ಗಮನ ಸೆಳೆದಿದ್ದರು. ಬಳಿಕ ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’, ‘ಪಂಚಾಮೃತ’, ‘ಪರಿಚಯ’, ‘ಬಾರ್ಡರ್’ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಪ್ರೇಕ್ಷಕರ ಮನಗೆದ್ದಿದ್ದರು. ವಿಶೇಷವಾಗಿ ‘ಮಿಲನ’ ಚಿತ್ರದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಸಹೋದರನ ಪಾತ್ರದಲ್ಲಿ ಅಭಿನಯಿಸಿ ಅಪಾರ ಜನಪ್ರಿಯತೆ ಗಳಿಸಿದ್ದರು.
ಚಿತ್ರರಂಗದ ಜೊತೆಗೆ ಕಿರುತೆರೆಯಲ್ಲೂ ದಿಲೀಪ್ ರಾಜ್ ತಮ್ಮದೇ ಆದ ಛಾಪು ಮೂಡಿಸಿದ್ದರು. ‘ಜನನಿ’ ಧಾರಾವಾಹಿಯ ಮೂಲಕ ಕಿರುತೆರೆಯಲ್ಲಿ ಪಯಣ ಆರಂಭಿಸಿದ ಅವರು, ನಂತರ ಯಶಸ್ವಿ ನಿರ್ಮಾಪಕರಾಗಿಯೂ ಹೊರಹೊಮ್ಮಿದರು. ಪತ್ನಿ ಶ್ರೀವಿದ್ಯಾ ಅವರೊಂದಿಗೆ ಸೇರಿ ಡಿ2ಆರ್ ಮೀಡಿಯಾ ಪ್ರೊಡಕ್ಷನ್ಸ್ ಮೂಲಕ ಹಲವು ಜನಪ್ರಿಯ ಧಾರಾವಾಹಿಗಳನ್ನು ನಿರ್ಮಿಸಿದ್ದರು. ಜೀ ಕನ್ನಡ ವಾಹಿನಿಯ ಸೂಪರ್ ಹಿಟ್ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಅವರ ನಿರ್ಮಾಣದ ಅತಿದೊಡ್ಡ ಯಶಸ್ಸಾಗಿದ್ದು, ಅದರಲ್ಲಿ ‘ಅಭಿರಾಮ್ ಜಯಶಂಕರ್’ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’, ‘ಕೃಷ್ಣ ರುಕ್ಕು’ ಸೇರಿದಂತೆ ಹಲವು ಧಾರಾವಾಹಿಗಳ ಮೂಲಕವೂ ಅವರು ಕಿರುತೆರೆ ಪ್ರೇಕ್ಷಕರ ಹೃದಯ ಗೆದ್ದಿದ್ದರು.
ನಟನೆ ಮಾತ್ರವಲ್ಲದೆ, ಡಬ್ಬಿಂಗ್ ಕಲಾವಿದರಾಗಿಯೂ ಅವರು ಗುರುತಿಸಿಕೊಂಡಿದ್ದರು. ಶಿಸ್ತು, ಸಮಯಪ್ರಜ್ಞೆ ಮತ್ತು ಸ್ನೇಹಪರ ವ್ಯಕ್ತಿತ್ವದಿಂದ ದಿಲೀಪ್ ರಾಜ್ ಎಲ್ಲರ ಮೆಚ್ಚುಗೆ ಪಡೆದಿದ್ದರು.
ಹಿರಿಯ ನಟ ದೊಡ್ಡಣ್ಣ ಅವರು ದಿಲೀಪ್ ರಾಜ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, “ದಿಲೀಪ್ ರಾಜ್ ಅವರ ತಂದೆ ಹೆಚ್.ಎಂ. ಶಿವರುದ್ರಪ್ಪ ಅವರು ನಮ್ಮ ಕುಟುಂಬದ ಆತ್ಮೀಯರು. ದಿಲೀಪ್ ರಾಜ್ ನಮ್ಮ ಮಕ್ಕಳಂತಿದ್ದರು. ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು” ಎಂದು ಹೇಳಿದ್ದಾರೆ.
ಕಲಾಭಿಮಾನಿಗಳ ಹೃದಯದಲ್ಲಿ ಸದಾ ಜೀವಂತವಾಗಿರುವ ದಿಲೀಪ್ ರಾಜ್ ಅವರ ನಗುಮುಖ, ಸರಳತೆ ಮತ್ತು ಕಲಾಪ್ರೇಮ ಕನ್ನಡ ಚಿತ್ರರಂಗಕ್ಕೆ ಎಂದಿಗೂ ಮರೆಯಲಾಗದ ನೆನಪಾಗಿ ಉಳಿಯಲಿದೆ.
ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ಸಮಾನವಾಗಿ ಯಶಸ್ಸು ಕಂಡ ದಿಲೀಪ್ ರಾಜ್, ತಮ್ಮ ಪ್ರತಿಭೆ ಮತ್ತು ಪರಿಶ್ರಮದಿಂದ ಕನ್ನಡ ಮನಗಳಿಗೆ ಹತ್ತಿರವಾದ ಕಲಾವಿದರಾಗಿದ್ದರು. ಅವರ ಅಗಲಿಕೆ ಕನ್ನಡ ಮನರಂಜನಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm