ಬ್ರೇಕಿಂಗ್ ನ್ಯೂಸ್
13-05-26 12:39 pm HK News Staffer ಕ್ರೈಂ
ಉಳ್ಳಾಲ, ಮೇ 13: ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಘೇರಾವ್ ಹಾಕಿ ತರಾಟೆಗೈದ ಮದನಿ ನಗರದ ಜುನೈದ್ ಮತ್ತು ಆತನ ಹತ್ತು ಜನ ಸಹಚರರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಸ್ಪೀಕರ್ ಯು.ಟಿ.ಖಾದರ್ ಅವರ ಅಂಗ ರಕ್ಷಕ ಸಿಎಸ್ ಆರ್ ಘಟಕದ ಸಿಬ್ಬಂದಿ ಮೊಹಮ್ಮದ್ ಯಾಸೀನ್ ಇನಾಮದಾರ ನೀಡಿರುವ ದೂರಿನ ಆಧಾರದಡಿ ಉಳ್ಳಾಲ ಠಾಣೆಯಲ್ಲಿ ಹನ್ನೊಂದು ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ಮೇ 7 ರ ಗುರುವಾರ ರಾತ್ರಿ 10 ಗಂಟೆ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ಮಾಸ್ತಿಕಟ್ಟೆಯ ರೆಸಾರ್ಟ್ ಒಂದರಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂತಿರುಗುವ ವೇಳೆ ಮದನಿ ನಗರದ ಜುನೈದ್ ಹಾಗೂ ಇತರ ಹತ್ತು ಮಂದಿ ಏಕಾಏಕಿ ಸ್ಪೀಕರ್ ಬಳಿ ಹೋಗುವಾಗ ಅಂಗರಕ್ಷಕರಾದ ಮೊಹಮ್ಮದ್ ಯಾಸೀನ ಅವರನ್ನು ತಡೆದಿದ್ದು , ಈಗಾಗಲೇ ಬಹಳ ತಡವಾಗಿದೆ ಎಂದು ಹೇಳಿ ಸ್ಪೀಕರ್ ಭೇಟಿಗೆ ಅವಕಾಶ ನಿರಾಕರಿಸಿದ್ದರು. ಈ ವೇಳೆ ಜುನೈದ್ ಹಾಗೂ ಸಹಚರರು ಅಂಗರಕ್ಷಕ ಯಾಸೀನ್ ಅವರನ್ನ ತಳ್ಳಿ ಮುನ್ನುಗ್ಗಿದ್ದು, ಸ್ಪೀಕರ್ ಖಾದರ್ ಅವರನ್ನ ಘೇರಾವ್ ಹಾಕಿ ಏರು ಧ್ವನಿಯಲ್ಲಿ ಕುತ್ತಾರು ಕೊರಗಜ್ಜನ ವೃತ್ತದ ವಿಚಾರದಲ್ಲಿ ತರಾಟೆಗೈದಿದ್ದಲ್ಲದೆ, ಅದರ ವೀಡಿಯೋವನ್ನು ಆಕ್ಷೇಪಾರ್ಹ ಬರಹಗಳೊಂದಿಗೆ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದಾಗಿ ಗನ್ ಮ್ಯಾನ್ ಮೊಹಮ್ಮದ್ ಯಾಸೀನ ಅವರು ತನ್ನ ಮೇಲಾಧಿಕಾರಿಗಳ ಸೂಚನೆಯಂತೆ ಮೇ 9 ರಂದು ತಡವಾಗಿ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಬರುವ ಭಕ್ತಾಧಿಗಳಿಗೆ ಮಾಹಿತಿ ನೀಡುವುದಕ್ಕಾಗಿ ವರ್ಷಗಳ ಹಿಂದೆ ಕುತ್ತಾರು ಜಂಕ್ಷನ್ ನಲ್ಲಿ ಸ್ಥಳೀಯ ಬಜರಂಗದಳ ಸಂಘಟನೆಯು ಕೊರಗಜ್ಜನ ಮುಟ್ಟಾಳೆ ಹಾಗೂ ದಂಟೆಯ ಪ್ರತಿಕೃತಿಯುಳ್ಳ ಸಣ್ಣ ವೃತ್ತವೊಂದನ್ನ ನಿರ್ಮಿಸಿತ್ತು. ಇದೀಗ ಆ ಸಣ್ಣ ವೃತ್ತವನ್ನ ತೆರವುಗೊಳಿಸಿ ನಿಟ್ಟೆ ಪರಿಗಣಿತ ವಿವಿಯು ನೂತನ ವೃತ್ತವೊಂದನ್ನು ನಿರ್ಮಿಸುತ್ತಿದೆ. ಈ ಮಧ್ಯೆ ಕುತ್ತಾರಿನಲ್ಲಿ ಕೊರಗಜ್ಜನ ಹೆಸರಲ್ಲಿ ವೃತ್ತ ನಿರ್ಮಾಣವಾಗಬಾರದೆಂದು ಕುತ್ತಾರು ಮದನಿನಗರದ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿ ಸ್ಪೀಕರ್ ಖಾದರ್ ಅವರನ್ನ ಘೇರಾವ್ ಮಾಡಿ ತರಾಟೆಗೈದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಉಂಟು ಮಾಡಿದ್ದಲ್ಲದೆ, ಸ್ಪೀಕರ್ ಅವರ ಭದ್ರತಾ ವ್ಯವಸ್ಥೆಯ ಬಗ್ಗೆಯೂ ಪ್ರಶ್ನೆ ಹುಟ್ಟು ಹಾಕಿತ್ತು.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm